22.7 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಬೆಳೆ ಸಾಲ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲ:ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಆಗ್ರಹ

ಬೆಳ್ತಂಗಡಿ: ರೈತರಿಗೆ ಸಹಕಾರ ಸಂಘಗಳ ಮೂಲಕ ನೀಡುವ ಬೆಳೆ ಸಾಲವನ್ನು ರೂ. 3 ಲಕ್ಷ ದಿಂದ 5 ಲಕ್ಷ ರೂ.ವರೆಗೆ ಏರಿಸಲಾಗಿದ್ದರೂ ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಈ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲವಾಗಿದೆ. ಇದಕ್ಕಾಗಿ ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಯೋಜನೆಯ ಬಗ್ಗೆ ಸೆ. 12 ರಂದು ಸಹಕಾರ ಇಲಾಖೆ ಮೂಲಕ ಆದೇಶ ಮಾಡಲಾಗಿದೆ. ಆದರೆ ಈ ಸಾಲ ನೀಡಲು ಅಗತ್ಯವಿರುವ ನಿಧಿಯನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ. ಇದರಿಂದ ಹೆಚ್ಚಿಸಿರುವ ಸಾಲದ ಮೊತ್ತವನ್ನು ಸಹಕಾರ ಸಂಘಗಳು ಸ್ವಂತ ನಿಧಿಯಿಂದ ನೀಡಬೆಕಾಗಿದೆ. ಸಾವಿರಾರು ಸದಸ್ಯರಿಗೆ ಸ್ವಂತ ನಿಧಿಯಿಂದ ಸಾಲ ನೀಡಿದರೆ ಅದು ಸಹಕಾರ ಸಂಘಗಳ ವ್ಯವಹಾರದ ಮೇಲೆ ವ್ಯತರಿಕ್ತ ಪರಿಣಾಮ ಬೀರಲಿದೆ. ಈ ಕಾರಣದಿಂದ ಸಹಕಾರ ಸಂಘಗಳು ಹೆಚ್ಚಿನ ಸಾಲದ ಪ್ರಮಾಣದ ಮೊತ್ತವನ್ನು ರೈತರಿಗೆ ನೀಡಲು ಹಿಂದೇಟು ಹಾಕುತ್ತಿವೆ. ಇದರಿಂದ ಸರಕಾರ ಯೋಜನೆ ಘೋಷಿಸಿದ್ದರೂ ಇದು ಜಿಲ್ಲೆಯ ಮಟ್ಟಿಗೆ ಫಲಾನುಭವಿಗಳನ್ನು ತಲುಪದ ಯೋಜನೆಯಾಗಿ ಮುಂದುವರಿದಿದೆ. ಹೀಗಾಗಿ ಇದಕ್ಕೆ ಬೇಕಾಗುವ ನಿಧಿಯನ್ನು ಕೂಡಲೆ ಬಿಡುಗಡೆಗೊಳಿಸಿ ರೈತರರಿಗೆ ನೆರವಾಗಬೇಕೆಂದು ಮಾ.7 ರಂದು ಅವರು ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Related posts

ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

Suddi Udaya

ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಎಲ್.ಹೆಚ್. ಮಂಜುನಾಥ್

Suddi Udaya

ಮೊಗ್ರು: ಅಲೆಕ್ಕಿ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಇದರ ಬೆಳ್ಳಿಹಬ್ಬದ ಪ್ರಯುಕ್ತ ರಜತ ಮಹೋತ್ಸವ ಪ್ರತಿಬಿಂಬ ವಿಜ್ಞಾಪನ ಪತ್ರ ಬಿಡುಗಡೆ

Suddi Udaya

ಭವಿಷ್ಯದ ಚಿತ್ರರಂಗದ ಭರವಸೆಯ ಕಲಾವಿದ ರಾಜ್ ಚರಣ್ ಬ್ರಹ್ಮಾವರ್

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!