July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಬೆಳೆ ಸಾಲ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲ:ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಆಗ್ರಹ

ಬೆಳ್ತಂಗಡಿ: ರೈತರಿಗೆ ಸಹಕಾರ ಸಂಘಗಳ ಮೂಲಕ ನೀಡುವ ಬೆಳೆ ಸಾಲವನ್ನು ರೂ. 3 ಲಕ್ಷ ದಿಂದ 5 ಲಕ್ಷ ರೂ.ವರೆಗೆ ಏರಿಸಲಾಗಿದ್ದರೂ ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಈ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲವಾಗಿದೆ. ಇದಕ್ಕಾಗಿ ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಯೋಜನೆಯ ಬಗ್ಗೆ ಸೆ. 12 ರಂದು ಸಹಕಾರ ಇಲಾಖೆ ಮೂಲಕ ಆದೇಶ ಮಾಡಲಾಗಿದೆ. ಆದರೆ ಈ ಸಾಲ ನೀಡಲು ಅಗತ್ಯವಿರುವ ನಿಧಿಯನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ. ಇದರಿಂದ ಹೆಚ್ಚಿಸಿರುವ ಸಾಲದ ಮೊತ್ತವನ್ನು ಸಹಕಾರ ಸಂಘಗಳು ಸ್ವಂತ ನಿಧಿಯಿಂದ ನೀಡಬೆಕಾಗಿದೆ. ಸಾವಿರಾರು ಸದಸ್ಯರಿಗೆ ಸ್ವಂತ ನಿಧಿಯಿಂದ ಸಾಲ ನೀಡಿದರೆ ಅದು ಸಹಕಾರ ಸಂಘಗಳ ವ್ಯವಹಾರದ ಮೇಲೆ ವ್ಯತರಿಕ್ತ ಪರಿಣಾಮ ಬೀರಲಿದೆ. ಈ ಕಾರಣದಿಂದ ಸಹಕಾರ ಸಂಘಗಳು ಹೆಚ್ಚಿನ ಸಾಲದ ಪ್ರಮಾಣದ ಮೊತ್ತವನ್ನು ರೈತರಿಗೆ ನೀಡಲು ಹಿಂದೇಟು ಹಾಕುತ್ತಿವೆ. ಇದರಿಂದ ಸರಕಾರ ಯೋಜನೆ ಘೋಷಿಸಿದ್ದರೂ ಇದು ಜಿಲ್ಲೆಯ ಮಟ್ಟಿಗೆ ಫಲಾನುಭವಿಗಳನ್ನು ತಲುಪದ ಯೋಜನೆಯಾಗಿ ಮುಂದುವರಿದಿದೆ. ಹೀಗಾಗಿ ಇದಕ್ಕೆ ಬೇಕಾಗುವ ನಿಧಿಯನ್ನು ಕೂಡಲೆ ಬಿಡುಗಡೆಗೊಳಿಸಿ ರೈತರರಿಗೆ ನೆರವಾಗಬೇಕೆಂದು ಮಾ.7 ರಂದು ಅವರು ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Related posts

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪೊಲೀಸ್ ದೂರು

Suddi Udaya

ಪಡಂಗಡಿ: ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ವಾರ್ಷಿಕ ವಿಶೇಷ ಶಿಬಿರ

Suddi Udaya

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯೇಕ ಎರಡು ಅಪಘಾತ: ಪ್ರಾಣಾಪಾಯದಿಂದ ಪಾರು

Suddi Udaya

ಕೊಕ್ಕಡ: ದುರಸ್ತಿ ಕಾಣದ ರಸ್ತೆ: ಸ್ವಂತ ಖರ್ಚಿನಲ್ಲಿ ರಸ್ತೆ ಸರಿಪಡಿಸಿದ ಆಟೋ ಚಾಲಕರು

Suddi Udaya
error: Content is protected !!