23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಬೆಳೆ ಸಾಲ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲ:ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಆಗ್ರಹ

ಬೆಳ್ತಂಗಡಿ: ರೈತರಿಗೆ ಸಹಕಾರ ಸಂಘಗಳ ಮೂಲಕ ನೀಡುವ ಬೆಳೆ ಸಾಲವನ್ನು ರೂ. 3 ಲಕ್ಷ ದಿಂದ 5 ಲಕ್ಷ ರೂ.ವರೆಗೆ ಏರಿಸಲಾಗಿದ್ದರೂ ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಈ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲವಾಗಿದೆ. ಇದಕ್ಕಾಗಿ ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಯೋಜನೆಯ ಬಗ್ಗೆ ಸೆ. 12 ರಂದು ಸಹಕಾರ ಇಲಾಖೆ ಮೂಲಕ ಆದೇಶ ಮಾಡಲಾಗಿದೆ. ಆದರೆ ಈ ಸಾಲ ನೀಡಲು ಅಗತ್ಯವಿರುವ ನಿಧಿಯನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ. ಇದರಿಂದ ಹೆಚ್ಚಿಸಿರುವ ಸಾಲದ ಮೊತ್ತವನ್ನು ಸಹಕಾರ ಸಂಘಗಳು ಸ್ವಂತ ನಿಧಿಯಿಂದ ನೀಡಬೆಕಾಗಿದೆ. ಸಾವಿರಾರು ಸದಸ್ಯರಿಗೆ ಸ್ವಂತ ನಿಧಿಯಿಂದ ಸಾಲ ನೀಡಿದರೆ ಅದು ಸಹಕಾರ ಸಂಘಗಳ ವ್ಯವಹಾರದ ಮೇಲೆ ವ್ಯತರಿಕ್ತ ಪರಿಣಾಮ ಬೀರಲಿದೆ. ಈ ಕಾರಣದಿಂದ ಸಹಕಾರ ಸಂಘಗಳು ಹೆಚ್ಚಿನ ಸಾಲದ ಪ್ರಮಾಣದ ಮೊತ್ತವನ್ನು ರೈತರಿಗೆ ನೀಡಲು ಹಿಂದೇಟು ಹಾಕುತ್ತಿವೆ. ಇದರಿಂದ ಸರಕಾರ ಯೋಜನೆ ಘೋಷಿಸಿದ್ದರೂ ಇದು ಜಿಲ್ಲೆಯ ಮಟ್ಟಿಗೆ ಫಲಾನುಭವಿಗಳನ್ನು ತಲುಪದ ಯೋಜನೆಯಾಗಿ ಮುಂದುವರಿದಿದೆ. ಹೀಗಾಗಿ ಇದಕ್ಕೆ ಬೇಕಾಗುವ ನಿಧಿಯನ್ನು ಕೂಡಲೆ ಬಿಡುಗಡೆಗೊಳಿಸಿ ರೈತರರಿಗೆ ನೆರವಾಗಬೇಕೆಂದು ಮಾ.7 ರಂದು ಅವರು ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Related posts

ಜು.15: ಧರ್ಮಸ್ಥಳದಲ್ಲಿ ಆತಿಥ್ಯ ವೆಜ್ ಹೊಟೇಲ್ ಶುಭಾರಂಭ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ರಿಟ್ ಪಿಟಿಷನ್ ವಜಾ

Suddi Udaya

ಮದ್ದಡ್ಕ ಭಜನಾ ಮಂದಿರದಲ್ಲಿ ಶ್ರೀ ರಾಮನವಮಿ ಉತ್ಸವ: ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: “ಆರಿದ್ರಾ ಮಳೆ ಆರ್ಭಟ”- ಮೈದುಂಬಿ ಹರಿದ ನದಿಗಳು-ಶಿಶಿಲೇಶ್ವರ ದೇವಾಲಯಕ್ಕೆ ಜಲದಿಗ್ಬಂದನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಯುಗಾದಿ ಹಬ್ಬದ ಸಂಭ್ರಮ

Suddi Udaya

ಕಳೆಂಜ ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ: ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ನ್ಯಾಯಾಲಯ ಆದೇಶ

Suddi Udaya
error: Content is protected !!