ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

ಬಂದಾರು :ಬಂದಾರು ಗ್ರಾಮ ಪಂಚಾಯತ್ ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಸಹಯೋಗದೊಂದಿಗೆ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮ ಸಭೆ ಪಂಚಾಯತ್ ಸಭಾಂಗಣದಲ್ಲಿ ಮಾ 11 ರಂದು ನಡೆಯಿತು.


ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಮತ್ತು ಸಿದ್ಧಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಹಾಲಕ್ಷ್ಮಿ ಯವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಎನ್ಆರ್.ಎಲ್.ಎಮ್ ಬೆಳ್ತಂಗಡಿ ತಾ ಪಂ ನ ವಲಯ ಮೇಲ್ವಚಾರಕಿ ವೀಣಾ ಎನ್ಆರ್.ಎಲ್.ಎಮ್ ಸಂಜೀವಿನಿ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ನಂತರ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ರಾಜ್ಯ ಮಟ್ಟದ ಸಾಹಿತ್ಯ ಕ್ಷೇತ್ರದಲ್ಲಿ ಕವನ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಧೃತಿ . ಎನ್.ಡಿ ಇವರಿಗೆ ಗ್ರಾ . ಪಂ ಹಾಗೂ ಒಕ್ಕೂಟದ ವತಿಯಿಂದ ಸನ್ಮಾನ ಮಾಡಲಾಯಿತು.

ನೂತನ ಪದಾಧಿಕಾರಿಗಳ ಪದಗ್ರಹಣವನ್ನು ತಾಲೂಕು ಪಂಚಾಯತ್ ನ ಎನ್ಆರ್.ಎಲ್.ಎಮ್ ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ ನೆರವೇರಿಸಿಕೊಟ್ಟರು . ಮಾಜಿ ಪದಾಧಿಕಾರಿಗಳಿಗೆ ಗೌರವ ಸ್ಮರಣಿಕೆ ನೀಡಿ ಬೀಳ್ಕೊಡುಗೆ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು,ಪಂಚಾಯತ್ ಉಪಾಧ್ಯಕ್ಷರಾದ ಪುಷ್ಪಾವತಿ ಹಾಗೂ ಗ್ರಾ.ಪಂ ನ ಸದಸ್ಯರು. ಮತ್ತು ಸಂಜೀವಿನಿ ಸಂಘಗಳ ಸದಸ್ಯರುಗಳು ಉಪಸ್ಥಿತರಿದ್ದರು.

ಎಲ್.ಸಿ.ಆರ್.ಪಿ ಭಾಗ್ಯಶ್ರೀ ನಿರೂಪಿಸಿ, ಪ್ರಾರ್ಥಿಸಿದರು, ಎಂಬಿಕೆ ಮೇಘನ ರವರು ಸ್ವಾಗತಿಸಿದರು , ಎಲ್.ಸಿ.ಆರ್.ಪಿ ಪವಿತ್ರ ಜಮಾ-ಖರ್ಚು ಮಂಡನೆ ಮಾಡಿ ಸದಸ್ಯರಿಂದ ಅನುಮೋದನೆ ಪಡೆದರು .ಎಮ್.ಬಿ.ಕೆ ಮೇಘನ ವಾರ್ಷಿಕ ವರದಿ ಮಂಡನೆ ಮಾಡಿ ಸದಸ್ಯರಿಂದ ಅನುಮೋದನೆ ಪಡೆದರು. ಬಿ.ಸಿ ಸಖಿ ಲಕ್ಷ್ಮೀ ವಂದಿಸಿದರು .

Related posts

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ.ಶಿಕ್ಷಕ ರಕ್ಷಕ ಸಂಘದ ಪೋಷಕರ ಸಭೆ .

Suddi Udaya

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್ ಆರಂಭ ಆ.7 ರಿಂದ 16 ರವರೆಗೆ ಗ್ರಾಹಕರಿಗೆ ವಿಶೇಷ ರಿಯಾಯಿತಿ

Suddi Udaya

ಉಜಿರೆ ರತ್ನಮಾನಸದಲ್ಲಿ “ಆಟಿದ ಅಟಿಲ್ ” ಕಾರ್ಯಕ್ರಮ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಮೂಡಾದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಬೇಕಾಗಿ ಬಂದಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಿದ್ಧರಾಮಯ್ಯ ರಿಗೆ ಯಾವುದೇ ನೈತಿಕತೆ ಇಲ್ಲ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya
error: Content is protected !!