23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

ಬಂದಾರು :ಬಂದಾರು ಗ್ರಾಮ ಪಂಚಾಯತ್ ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಸಹಯೋಗದೊಂದಿಗೆ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮ ಸಭೆ ಪಂಚಾಯತ್ ಸಭಾಂಗಣದಲ್ಲಿ ಮಾ 11 ರಂದು ನಡೆಯಿತು.


ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಮತ್ತು ಸಿದ್ಧಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಹಾಲಕ್ಷ್ಮಿ ಯವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಎನ್ಆರ್.ಎಲ್.ಎಮ್ ಬೆಳ್ತಂಗಡಿ ತಾ ಪಂ ನ ವಲಯ ಮೇಲ್ವಚಾರಕಿ ವೀಣಾ ಎನ್ಆರ್.ಎಲ್.ಎಮ್ ಸಂಜೀವಿನಿ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ನಂತರ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ರಾಜ್ಯ ಮಟ್ಟದ ಸಾಹಿತ್ಯ ಕ್ಷೇತ್ರದಲ್ಲಿ ಕವನ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಧೃತಿ . ಎನ್.ಡಿ ಇವರಿಗೆ ಗ್ರಾ . ಪಂ ಹಾಗೂ ಒಕ್ಕೂಟದ ವತಿಯಿಂದ ಸನ್ಮಾನ ಮಾಡಲಾಯಿತು.

ನೂತನ ಪದಾಧಿಕಾರಿಗಳ ಪದಗ್ರಹಣವನ್ನು ತಾಲೂಕು ಪಂಚಾಯತ್ ನ ಎನ್ಆರ್.ಎಲ್.ಎಮ್ ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ ನೆರವೇರಿಸಿಕೊಟ್ಟರು . ಮಾಜಿ ಪದಾಧಿಕಾರಿಗಳಿಗೆ ಗೌರವ ಸ್ಮರಣಿಕೆ ನೀಡಿ ಬೀಳ್ಕೊಡುಗೆ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು,ಪಂಚಾಯತ್ ಉಪಾಧ್ಯಕ್ಷರಾದ ಪುಷ್ಪಾವತಿ ಹಾಗೂ ಗ್ರಾ.ಪಂ ನ ಸದಸ್ಯರು. ಮತ್ತು ಸಂಜೀವಿನಿ ಸಂಘಗಳ ಸದಸ್ಯರುಗಳು ಉಪಸ್ಥಿತರಿದ್ದರು.

ಎಲ್.ಸಿ.ಆರ್.ಪಿ ಭಾಗ್ಯಶ್ರೀ ನಿರೂಪಿಸಿ, ಪ್ರಾರ್ಥಿಸಿದರು, ಎಂಬಿಕೆ ಮೇಘನ ರವರು ಸ್ವಾಗತಿಸಿದರು , ಎಲ್.ಸಿ.ಆರ್.ಪಿ ಪವಿತ್ರ ಜಮಾ-ಖರ್ಚು ಮಂಡನೆ ಮಾಡಿ ಸದಸ್ಯರಿಂದ ಅನುಮೋದನೆ ಪಡೆದರು .ಎಮ್.ಬಿ.ಕೆ ಮೇಘನ ವಾರ್ಷಿಕ ವರದಿ ಮಂಡನೆ ಮಾಡಿ ಸದಸ್ಯರಿಂದ ಅನುಮೋದನೆ ಪಡೆದರು. ಬಿ.ಸಿ ಸಖಿ ಲಕ್ಷ್ಮೀ ವಂದಿಸಿದರು .

Related posts

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

Suddi Udaya

ಮೂಡುಬಿದಿರೆ: ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ಹೂವಿನ ಪೂಜೆ

Suddi Udaya

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

Suddi Udaya

ಬೆಳ್ತಂಗಡಿ: ತಾಲೂಕಿನ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

Suddi Udaya

ರಾಜ್ಯಮಟ್ಟದ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಚಾಂಪಿಯನ್ಸ್

Suddi Udaya
error: Content is protected !!