July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

ಬಂದಾರು :ಬಂದಾರು ಗ್ರಾಮ ಪಂಚಾಯತ್ ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಸಹಯೋಗದೊಂದಿಗೆ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮ ಸಭೆ ಪಂಚಾಯತ್ ಸಭಾಂಗಣದಲ್ಲಿ ಮಾ 11 ರಂದು ನಡೆಯಿತು.


ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಮತ್ತು ಸಿದ್ಧಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಹಾಲಕ್ಷ್ಮಿ ಯವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಎನ್ಆರ್.ಎಲ್.ಎಮ್ ಬೆಳ್ತಂಗಡಿ ತಾ ಪಂ ನ ವಲಯ ಮೇಲ್ವಚಾರಕಿ ವೀಣಾ ಎನ್ಆರ್.ಎಲ್.ಎಮ್ ಸಂಜೀವಿನಿ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ನಂತರ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ರಾಜ್ಯ ಮಟ್ಟದ ಸಾಹಿತ್ಯ ಕ್ಷೇತ್ರದಲ್ಲಿ ಕವನ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಧೃತಿ . ಎನ್.ಡಿ ಇವರಿಗೆ ಗ್ರಾ . ಪಂ ಹಾಗೂ ಒಕ್ಕೂಟದ ವತಿಯಿಂದ ಸನ್ಮಾನ ಮಾಡಲಾಯಿತು.

ನೂತನ ಪದಾಧಿಕಾರಿಗಳ ಪದಗ್ರಹಣವನ್ನು ತಾಲೂಕು ಪಂಚಾಯತ್ ನ ಎನ್ಆರ್.ಎಲ್.ಎಮ್ ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ ನೆರವೇರಿಸಿಕೊಟ್ಟರು . ಮಾಜಿ ಪದಾಧಿಕಾರಿಗಳಿಗೆ ಗೌರವ ಸ್ಮರಣಿಕೆ ನೀಡಿ ಬೀಳ್ಕೊಡುಗೆ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು,ಪಂಚಾಯತ್ ಉಪಾಧ್ಯಕ್ಷರಾದ ಪುಷ್ಪಾವತಿ ಹಾಗೂ ಗ್ರಾ.ಪಂ ನ ಸದಸ್ಯರು. ಮತ್ತು ಸಂಜೀವಿನಿ ಸಂಘಗಳ ಸದಸ್ಯರುಗಳು ಉಪಸ್ಥಿತರಿದ್ದರು.

ಎಲ್.ಸಿ.ಆರ್.ಪಿ ಭಾಗ್ಯಶ್ರೀ ನಿರೂಪಿಸಿ, ಪ್ರಾರ್ಥಿಸಿದರು, ಎಂಬಿಕೆ ಮೇಘನ ರವರು ಸ್ವಾಗತಿಸಿದರು , ಎಲ್.ಸಿ.ಆರ್.ಪಿ ಪವಿತ್ರ ಜಮಾ-ಖರ್ಚು ಮಂಡನೆ ಮಾಡಿ ಸದಸ್ಯರಿಂದ ಅನುಮೋದನೆ ಪಡೆದರು .ಎಮ್.ಬಿ.ಕೆ ಮೇಘನ ವಾರ್ಷಿಕ ವರದಿ ಮಂಡನೆ ಮಾಡಿ ಸದಸ್ಯರಿಂದ ಅನುಮೋದನೆ ಪಡೆದರು. ಬಿ.ಸಿ ಸಖಿ ಲಕ್ಷ್ಮೀ ವಂದಿಸಿದರು .

Related posts

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

Suddi Udaya

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

Suddi Udaya

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya

ಕೊಯ್ಯೂರು: ಶ್ರೀಕೃಷ್ಣ ಭಜನಾ ಮಂಡಳಿಗೆ ಇನ್ವರ್ಟರ್ ಕೊಡುಗೆ

Suddi Udaya

ಮುಂಡಾಜೆ ತಡೆಗೋಡೆಗೆ ಕಾರು ಡಿಕ್ಕಿ : ಪ್ರಯಾಣಿಕರು ಅಪಾಯದಿಂದ ಪಾರು

Suddi Udaya
error: Content is protected !!