22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಡಂತ್ಯಾರು: ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಲ್ಲಿ ಪ್ರತಿಭಟನೆ

ಮಚ್ಚಿನ ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಹಾಗೂ ಊರ ಗ್ರಾಮಸ್ಥರಿಂದ ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಯಲ್ಲಿ ಪ್ರತಿಭಟನೆ ಮಾ.12 ರಂದು ನಡೆಯಿತು.

ಮಚ್ಚಿನ ಗ್ರಾಮ ಪಂಚಾಯತ್ ಹಾಗೂ ಮಡಂತ್ಯಾರು ಗ್ರಾಮ ಪಂಚಾಯತಿಗೆ ಸೇರಿದ ಬಂಗೇರಕಟ್ಟೆ ನೆತ್ತರ ಜಂಟಿ ರಸ್ತೆಯು ತೀರ ಅದಕ್ಕೆಟ್ಟಿದ್ದು ಸಂಚಾರಕ್ಕೆ ಕಷ್ಟದ ಸ್ಥಿತಿಯಲ್ಲಿ ಇರುವ ಈ ರಸ್ತೆಯು ದುರಸ್ತಿ ಹಾಗೂ ಡಾಮಾರೀಕರಣಕ್ಕೆ, ದಾರಿದೀಪ ಚರಂಡಿ ದುರಸ್ತಿಗಳ ಬಗ್ಗೆ ಭಾಗ್ಯಶ್ರೀ ಮಿತ್ರ ಮಂಡಳಿ ಹಾಗೂ ಊರವರಿಂದ ನೆತ್ತರದಿಂದ ಮಚ್ಚಿನ ಮಡಂತ್ಯಾರು ಗ್ರಾಮ ಪಂಚಾಯತಿಗಳಿಗೆ ಕಾಲ್ನಡಿಗೆಯ ಮೂಲಕ ಪ್ರತಿಭಟನೆ ನಡೆಯಿತು.

ಭರವಸೆ ಒಂದೇ ಸಾಲದು ಅಭಿವೃದ್ಧಿಯೆಂದು ಸ್ವಾಮಿ?. ಕಣ್ಣು ಮುಚ್ಚಿ ಕೂತಿರುವ ಎರಡು ಗ್ರಾಮ ಪಂಚಾಯಿತಿಗಳ / ಜನಪ್ರತಿನಿಧಿಗಳ ಕಣ್ಣು ತೆರೆಯಲು ಈ ನಮ್ಮ ಪ್ರತಿಭಟನೆ. ಮನವಿಗೆ ಲೆಕ್ಕಿಸದ ಗ್ರಾಮ ಪಂಚಾಯಿತಿಗಳಿಗೆ ಬೆವರು ಸುರಿಸಿ ಕಾಲ್ನಡಿಗೆಯ ಈ ನಮ್ಮ ಪ್ರತಿಭಟನೆ. ಇದಕ್ಕೂ ಲೆಕ್ಕಿಸದೆ ಇದ್ದಲ್ಲಿ ರಕ್ತಸುರಿಸಿ ಪ್ರತಿಭಟನೆ ನಡೆಸೆ ನಡೆಸುತ್ತೇವೆ ಚುನಾವಣೆಗೆ ಮುನ್ನ ರಸ್ತೆಯ ಅಭಿವೃದ್ಧಿ ನಡೆಸದೆ ಇದ್ದಲ್ಲಿ ಸಂಘ ಸಂಸ್ಥೆ ಊರವರಿಂದ ಉಗ್ರ ಹೋರಾಟ ನಡೆಸುತ್ತೇವೆ ಎಂದು ಮನವಿ ಹಾಗೂ ಬ್ಯಾನರ್ ಗಳನ್ನು ಅಳವಡಿಸಲಾಯಿತು.

ಮನವಿಯನ್ನು ಮಚ್ಚಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರಿಗೆ ಹಾಗೂ ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮನವಿ ನೀಡಿದರು.

ಈ ಸಂದರ್ಭದಲ್ಲಿ ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ವಿಶ್ವನಾಥ ಪೂಜಾರಿ, ಗೋಪಾಲಕೃಷ್ಣ, ಕಿಶೋರ್ ಶೆಟ್ಟಿ, ಮಚ್ಚಿನ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಮೋದ್ ಕುಮಾರ್, ಭಾಗ್ಯಶ್ರೀ ಮಿತ್ರ ಮಂಡಳಿಯ ಅಧ್ಯಕ್ಷರಾದ ಸಂತೋಷ್, ಕಾರ್ಯದರ್ಶಿ ಪ್ರಮೋದ್ ಕೋಡಿ, ಮಹಾಬಲ ನೆತ್ತರ, ಗೋಪಾಲ ಶೆಟ್ಟಿ, ಕೃಷ್ಣಪ್ಪ ಸಾಲ್ಯಾನ್, ಕೃಷ್ಣಪ್ಪ ಪೂಜಾರಿ, ಶಿವಪ್ಪ ಪೂಜಾರಿ, ಸದಸ್ಯರು ಹಾಗೂ ಊರ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸಮಸ್ತ ಸ್ಥಾಪಕ ದಿನದ ಅಂಗವಾಗಿ ಧ್ವಜಾರೋಹಣ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಪ್ರತಿಭಾ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಜಿಲ್ಲಾ ಮಟ್ಟದ ಐಕ್ಸ್ ವಾಲಿಬಾಲ್ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 20ನೇ‌ ಧರ್ಮಸ್ಥಳ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya
error: Content is protected !!