September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ14-15 ಎಸ್.ಡಿ.ಎಂ ಝೇಂಕಾರ ಉತ್ಸವ: ಖ್ಯಾತ ನಟ ರಮೇಶ್ ಅರವಿಂದ್ ವಿಶೇಷ ಆಕರ್ಷಣೆ

ಉಜಿರೆ: ಯುವ ಪ್ರತಿಭಾನ್ವಿತರ ಕಲಾತ್ಮಕ ಅಭಿವ್ಯಕ್ತಿಗೆ ವೇದಿಕೆ ಒದಗಿಸಿಕೊಡುವ ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದ ಪ್ರಸಕ್ತ ವರ್ಷದ ಝೇಂಕಾರದ ಐದನೇ ಆವೃತ್ತಿಯ ಸಾಂಸ್ಕೃತಿಕ ಉತ್ಸವ ಮಾ.14-15 ರಂದು ನಡೆಯಲಿದೆ. ಈ ಸಲದ ಪ್ರಮುಖ ಆಕರ್ಷಣೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಗಮನ ಸೆಳೆಯಲಿದ್ದಾರೆ.

ಪ್ರತಿವರ್ಷವೂ ಆಯೋಜಿತವಾಗುವ ಝೇಂಕಾರ ಸ್ಟಾರ್ ನೈಟ್‌ಗೆ ಖ್ಯಾತ ಜನಪ್ರಿಯ ನಟರು ಆಗಮಿಸುತ್ತಾರೆ. ಬೆಳೆಗಿನ ಅವಧಿಯಲ್ಲಿ ಉತ್ಸವಕ್ಕೆ ಚಾಲನೆ ನೀಡಿದ ನಂತರ ವಿವಿಧ ಸ್ಪರ್ಧೆಗಳು ಎರಡು ದಿನಗಳ ಕಾಲ ಆಯೋಜಿತವಾಗಲಿವೆ. ಆರಂಭದ ದಿನ ಸಂಜೆ ನಡೆಯುವ ಸ್ಟಾರ್‌ನೈಟ್ ಕಾರ್ಯಕ್ರಮವನ್ನು ರಮೇಶ್ ಅರವಿಂದ್ ನಡೆಸಿಕೊಡಲಿದ್ದಾರೆ.

ಮಾಕ್ ಪ್ರೆಸ್, ಪ್ರೊ ಪ್ರೆಸೆಂಟರ್, ಕಲರ್ ಫುಲ್ ಕ್ಯಾನವಾಸ್ ಶೀರ್ಷಿಕೆಯ ವೈಯುಕ್ತಿಕ ವಿಭಾಗದ ಸ್ಪರ್ಧೆಗಳು ನಡೆಯಲಿವೆ. ಗ್ರುಪ್ ಇವೆಂಟ್ ವಿಭಾಗದಲ್ಲಿ ಸಮೂಹ ನೃತ್ಯ, ಫ್ಯಾಷನ್ ಪರೇಡ್, ರಸಪ್ರಶ್ನೆ, ಔಟ್ ಡೋರ್ ಇವೆಂಟ್ ವಿಭಾಗದಲ್ಲಿ ಗಲ್ಲಿ ಕ್ರಿಕೆಟ್ ಪಂದ್ಯಾವಳಿ, ಸ್ಪಾಟ್ ಇವೆಂಟ್ ವಿಭಾಗದಲ್ಲಿ ರೀಲ್ ಮೇಕಿಂಗ್, ಸ್ಪಾಟ್ ಫೋಟೋಗ್ರಫಿ ಸ್ಪರ್ಧೆಗಳು ಏರ್ಪಡಲಿವೆ.

ರಾಜ್ಯದ ವಿವಿಧೆಡೆಗಳಿಂದ 40ಕ್ಕೂ ಹೆಚ್ಚು ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಎರಡು ದಿನಗಳ ಕಾಲ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಅಂಗಳ ವೈವಿಧ್ಯಮಯ ಸ್ಪರ್ಧೆಗಳಲ್ಲಿ ಭಾಗವಹಿಸುವ ಪ್ರತಿಭಾನ್ವಿತ ಯುವ ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣದ ವೇದಿಕೆಯಾಗಿ ಕಂಗೊಳಿಸಲಿದೆ. ವಿವಿಧ ವಿಭಾಗಗಳ ಸ್ಪರ್ಧೆಗಳಲ್ಲಿ ವಿಜೇತರಾಗುವ ವಿದ್ಯಾರ್ಥಿಗಳು ಒಂದು ಲಕ್ಷ ರೂ. ಮೌಲ್ಯದ ವಿವಿಧ ಬಹುಮಾನಗಳನ್ನು ಪಡೆಯಲಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಭೀಷ್ಮ ಏಕಾದಶೀ ಪ್ರಯುಕ್ತ ವಿಷ್ಣು ಸಹಸ್ರನಾಮ ಪಠಣ

Suddi Udaya

ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮ್ಯಾಟ್ ಕಬಡ್ಡಿ ಪಂದ್ಯಾಟ : ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಗೆ ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್‌, ಅರ್ವ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

Suddi Udaya
error: Content is protected !!