25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ14-15 ಎಸ್.ಡಿ.ಎಂ ಝೇಂಕಾರ ಉತ್ಸವ: ಖ್ಯಾತ ನಟ ರಮೇಶ್ ಅರವಿಂದ್ ವಿಶೇಷ ಆಕರ್ಷಣೆ

ಉಜಿರೆ: ಯುವ ಪ್ರತಿಭಾನ್ವಿತರ ಕಲಾತ್ಮಕ ಅಭಿವ್ಯಕ್ತಿಗೆ ವೇದಿಕೆ ಒದಗಿಸಿಕೊಡುವ ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದ ಪ್ರಸಕ್ತ ವರ್ಷದ ಝೇಂಕಾರದ ಐದನೇ ಆವೃತ್ತಿಯ ಸಾಂಸ್ಕೃತಿಕ ಉತ್ಸವ ಮಾ.14-15 ರಂದು ನಡೆಯಲಿದೆ. ಈ ಸಲದ ಪ್ರಮುಖ ಆಕರ್ಷಣೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಗಮನ ಸೆಳೆಯಲಿದ್ದಾರೆ.

ಪ್ರತಿವರ್ಷವೂ ಆಯೋಜಿತವಾಗುವ ಝೇಂಕಾರ ಸ್ಟಾರ್ ನೈಟ್‌ಗೆ ಖ್ಯಾತ ಜನಪ್ರಿಯ ನಟರು ಆಗಮಿಸುತ್ತಾರೆ. ಬೆಳೆಗಿನ ಅವಧಿಯಲ್ಲಿ ಉತ್ಸವಕ್ಕೆ ಚಾಲನೆ ನೀಡಿದ ನಂತರ ವಿವಿಧ ಸ್ಪರ್ಧೆಗಳು ಎರಡು ದಿನಗಳ ಕಾಲ ಆಯೋಜಿತವಾಗಲಿವೆ. ಆರಂಭದ ದಿನ ಸಂಜೆ ನಡೆಯುವ ಸ್ಟಾರ್‌ನೈಟ್ ಕಾರ್ಯಕ್ರಮವನ್ನು ರಮೇಶ್ ಅರವಿಂದ್ ನಡೆಸಿಕೊಡಲಿದ್ದಾರೆ.

ಮಾಕ್ ಪ್ರೆಸ್, ಪ್ರೊ ಪ್ರೆಸೆಂಟರ್, ಕಲರ್ ಫುಲ್ ಕ್ಯಾನವಾಸ್ ಶೀರ್ಷಿಕೆಯ ವೈಯುಕ್ತಿಕ ವಿಭಾಗದ ಸ್ಪರ್ಧೆಗಳು ನಡೆಯಲಿವೆ. ಗ್ರುಪ್ ಇವೆಂಟ್ ವಿಭಾಗದಲ್ಲಿ ಸಮೂಹ ನೃತ್ಯ, ಫ್ಯಾಷನ್ ಪರೇಡ್, ರಸಪ್ರಶ್ನೆ, ಔಟ್ ಡೋರ್ ಇವೆಂಟ್ ವಿಭಾಗದಲ್ಲಿ ಗಲ್ಲಿ ಕ್ರಿಕೆಟ್ ಪಂದ್ಯಾವಳಿ, ಸ್ಪಾಟ್ ಇವೆಂಟ್ ವಿಭಾಗದಲ್ಲಿ ರೀಲ್ ಮೇಕಿಂಗ್, ಸ್ಪಾಟ್ ಫೋಟೋಗ್ರಫಿ ಸ್ಪರ್ಧೆಗಳು ಏರ್ಪಡಲಿವೆ.

ರಾಜ್ಯದ ವಿವಿಧೆಡೆಗಳಿಂದ 40ಕ್ಕೂ ಹೆಚ್ಚು ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಎರಡು ದಿನಗಳ ಕಾಲ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಅಂಗಳ ವೈವಿಧ್ಯಮಯ ಸ್ಪರ್ಧೆಗಳಲ್ಲಿ ಭಾಗವಹಿಸುವ ಪ್ರತಿಭಾನ್ವಿತ ಯುವ ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣದ ವೇದಿಕೆಯಾಗಿ ಕಂಗೊಳಿಸಲಿದೆ. ವಿವಿಧ ವಿಭಾಗಗಳ ಸ್ಪರ್ಧೆಗಳಲ್ಲಿ ವಿಜೇತರಾಗುವ ವಿದ್ಯಾರ್ಥಿಗಳು ಒಂದು ಲಕ್ಷ ರೂ. ಮೌಲ್ಯದ ವಿವಿಧ ಬಹುಮಾನಗಳನ್ನು ಪಡೆಯಲಿದ್ದಾರೆ.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ, ದ.ಕ. ಜಿಲ್ಲೆ ದ್ವಿತೀಯ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್, ರೋಟರಿ ಬೆಂಗಳೂರು ಇಂದಿರಾ ನಗರ,ಕ್ಯಾನ್ ಪಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೈಕ್‌ಗೆ ಅಡ್ಡ ಬಂದ ನಾಯಿ: ಬೈಕ್ ಪಲ್ಟಿಯಾಗಿ ನವವಿವಾಹಿತೆ ದಾರುಣ ಸಾವು

Suddi Udaya
error: Content is protected !!