July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

ಬೆಳ್ತಂಗಡಿ: ಕಳೆದ ಕೆಲವು ದಿನಗಳಿಂದ ತಾಲೂಕಿನ ವಿವಿಧೆಡೆ ಒಂಟಿ ಸಲಗ ತಿರುಗಾಡುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಕಾಡಾನೆಯ ಸಂಚಾರದಿಂದ ರೈತರ ಕೃಷಿ ಭೂಮಿ ಹಲವು ಕಡೆ ನಾಶವಾಗಿದೆ.

ಇಂದು ಬೆಳಿಗ್ಗೆ ಮೊಗ್ರು ಗ್ರಾಮದ ಕರಂಬಾರುವಿನಲ್ಲಿ ಕಾಡಾನೆಯು ಪ್ರತ್ಯಕ್ಷವಾಗಿದ್ದು, ಕರಂಬಾರು ಕೃಷ್ಣಪ್ಪ ಗೌಡರ ನೀರಿನ ಪಂಪುಗೆ ಹಾನಿಮಾಡಿದ್ದು, ಗ್ರಾಮಸ್ಥರು ಜಾಗರುಕತೆಯಿಂದ ಇರುವಂತೆ ತಿಳಿಸಿದ್ದಾರೆ.

ಕಾಡಾನೆಯು ಕೊಯ್ಯರು, ಕಣಿಯೂರು ದಾಟಿ ಮಲೆಂಗಲ್ಲು, ಪದ್ಮುಂಜ, ಪೊಯ್ಯ ಮೂಲಕ ಮೊಗ್ರು ಗ್ರಾಮದ ಬುಳೇರಿ ಸಮೀಪದ ಕರಂಬಾರು ಸುದೆಪಿಲ ಸಮೀಪದ ನೇತ್ರಾವತಿ ನದಿಯಲ್ಲಿ ಜಳಕ ಮಾಡಿ ಮುಂದೆ ಸಾಗಿದೆ ಎಂದು ಮಾಹಿತಿ ಲಭಿಸಿದೆ.

Related posts

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ‌ ಪರ್ವ-2024 ಉದ್ಘಾಟನೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಲ್.ಸಿ.ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

Suddi Udaya

ಮಾ.30: ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿಯಿಂದ ಬರಾಯ ಭಜನಾ ಕಮ್ಮಟ ಉತ್ಸವ

Suddi Udaya

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

ಎಲ್‌ಕೆಜಿ ಪ್ರವೇಶಕ್ಕೆ 4 ವರ್ಷ ವಯಸ್ಸು ಕಡ್ಡಾಯ ಶಿಕ್ಷಣ ಇಲಾಖೆ ಆದೇಶ

Suddi Udaya
error: Content is protected !!