ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯದ 5,8 ಮತ್ತು 9ನೇ ತರಗತಿ “ಬೋರ್ಡ್​” ಪರೀಕ್ಷೆಗೆ “ಸುಪ್ರೀಂ ಕೋರ್ಟ್” ತಡೆಯಾಜ್ಞೆ

ಬೆಂಗಳೂರು : ನಿನ್ನೆಯಿಂದ 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆ ಆರಂಭಗೊಂಡಿದೆ. ಈ ಪರೀಕ್ಷೆಗಳನ್ನು ರದ್ದುಗೊಳಿಸಿ ಹೈಕೋರ್ಟ್‌ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಮಾಡಿತ್ತು. ಆಗ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಲಾಗಿತ್ತು. ಈ ಬೆನ್ನಲ್ಲೇ ಇಂದು ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಮೂಲಕ ಬೋರ್ಡ್ ಪರೀಕ್ಷೆ ರದ್ದುಗೊಂಡೆತೆ ಆಗಿದೆ.

ರಾಜ್ಯ ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ರಾಜ್ಯ ಪಠ್ಯಕ್ರಮ ಇರುವ ಶಾಲೆಗಳ 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಖಾಸಗಿ ಅನುವಾದ ರಹಿತ ಶಾಲೆಗಳು ಸಲ್ಲಿಸಿದ್ದಂತ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠವು ಇಂದು ವಿಚಾರಣೆ ನಡೆಸಿತು.

ಈಗಾಗಲೇ ಶಿಕ್ಷಣ ಇಲಾಖೆ ಸೋಮವಾರ ಮತ್ತು ಮಂಗಳವಾರದಂದು ಎರಡು ವಿಷಯಗಳ ಪರೀಕ್ಷೆಗಳನ್ನು ನಡೆಸಿದೆ. ಹೀಗಾಗಿ ಇನ್ನುಳಿದ ವಿಷಯಗಳ 5, 8 ಮತ್ತು 9ನೇ ತರಗತಿ ವಿಷಯಗಳ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಮುಂದುವರೆಸಿ ಆದೇಶಿಸಿದೆ. ಆದರೇ 11ನೇ ತರಗತಿ ಪರೀಕ್ಷೆಗಳು ಪೂರ್ಣಗೊಂಡಿರುವುದರಿಂದ ನ್ಯಾಯಪೀಠವು ಯಾವುದೇ ಆದೇಶ ಮಾಡಿಲ್ಲ.

Related posts

ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶಾಲಾ ಸಂಸತ್ತು ಚುನಾವಣೆ

Suddi Udaya

ಬಂದಾರು: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು, ಮಹಿಳೆ ಗಂಭೀರ

Suddi Udaya

ತಣ್ಣೀರುಪಂತ : ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು: ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ

Suddi Udaya

ಅಕ್ರಮ ತಲವಾರ್ ಮತ್ತು ಬಂದೂಕು ಪತ್ತೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧಿಸಲು ಮನೆಗೆ ಹೋದ ಬೆಳ್ತಂಗಡಿ ಪೊಲೀಸರು

Suddi Udaya

ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉ.ಸ.ಹಿ.ಪ್ರಾ. ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya
error: Content is protected !!