25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯದ 5,8 ಮತ್ತು 9ನೇ ತರಗತಿ “ಬೋರ್ಡ್​” ಪರೀಕ್ಷೆಗೆ “ಸುಪ್ರೀಂ ಕೋರ್ಟ್” ತಡೆಯಾಜ್ಞೆ

ಬೆಂಗಳೂರು : ನಿನ್ನೆಯಿಂದ 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆ ಆರಂಭಗೊಂಡಿದೆ. ಈ ಪರೀಕ್ಷೆಗಳನ್ನು ರದ್ದುಗೊಳಿಸಿ ಹೈಕೋರ್ಟ್‌ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಮಾಡಿತ್ತು. ಆಗ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಲಾಗಿತ್ತು. ಈ ಬೆನ್ನಲ್ಲೇ ಇಂದು ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಮೂಲಕ ಬೋರ್ಡ್ ಪರೀಕ್ಷೆ ರದ್ದುಗೊಂಡೆತೆ ಆಗಿದೆ.

ರಾಜ್ಯ ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ರಾಜ್ಯ ಪಠ್ಯಕ್ರಮ ಇರುವ ಶಾಲೆಗಳ 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಖಾಸಗಿ ಅನುವಾದ ರಹಿತ ಶಾಲೆಗಳು ಸಲ್ಲಿಸಿದ್ದಂತ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠವು ಇಂದು ವಿಚಾರಣೆ ನಡೆಸಿತು.

ಈಗಾಗಲೇ ಶಿಕ್ಷಣ ಇಲಾಖೆ ಸೋಮವಾರ ಮತ್ತು ಮಂಗಳವಾರದಂದು ಎರಡು ವಿಷಯಗಳ ಪರೀಕ್ಷೆಗಳನ್ನು ನಡೆಸಿದೆ. ಹೀಗಾಗಿ ಇನ್ನುಳಿದ ವಿಷಯಗಳ 5, 8 ಮತ್ತು 9ನೇ ತರಗತಿ ವಿಷಯಗಳ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಮುಂದುವರೆಸಿ ಆದೇಶಿಸಿದೆ. ಆದರೇ 11ನೇ ತರಗತಿ ಪರೀಕ್ಷೆಗಳು ಪೂರ್ಣಗೊಂಡಿರುವುದರಿಂದ ನ್ಯಾಯಪೀಠವು ಯಾವುದೇ ಆದೇಶ ಮಾಡಿಲ್ಲ.

Related posts

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

Suddi Udaya

ಬೆಳ್ತಂಗಡಿ: ರೈತರು ಫ್ರುಟ್ಸ್ ಐ.ಡಿ. ಮಾಡಿಸಿಕೊಳ್ಳುವಂತೆ ತಹಶೀಲ್ದಾರ್ ಪೃಥ್ವಿ ಸಾನಿಕಂ ಮನವಿ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ಇಂದು ಮಹಾ ಬ್ರಹ್ಮರಥೋತ್ಸವ

Suddi Udaya

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

Suddi Udaya

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ‘ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ’ ಪ್ರಶಸ್ತಿ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ‌

Suddi Udaya
error: Content is protected !!