25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯದ 5,8 ಮತ್ತು 9ನೇ ತರಗತಿ “ಬೋರ್ಡ್​” ಪರೀಕ್ಷೆಗೆ “ಸುಪ್ರೀಂ ಕೋರ್ಟ್” ತಡೆಯಾಜ್ಞೆ

ಬೆಂಗಳೂರು : ನಿನ್ನೆಯಿಂದ 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆ ಆರಂಭಗೊಂಡಿದೆ. ಈ ಪರೀಕ್ಷೆಗಳನ್ನು ರದ್ದುಗೊಳಿಸಿ ಹೈಕೋರ್ಟ್‌ ಆದೇಶಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗಿಯ ನ್ಯಾಯಪೀಠಕ್ಕೆ ಮೇಲ್ಮನವಿ ಮಾಡಿತ್ತು. ಆಗ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಲಾಗಿತ್ತು. ಈ ಬೆನ್ನಲ್ಲೇ ಇಂದು ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಮೂಲಕ ಬೋರ್ಡ್ ಪರೀಕ್ಷೆ ರದ್ದುಗೊಂಡೆತೆ ಆಗಿದೆ.

ರಾಜ್ಯ ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ರಾಜ್ಯ ಪಠ್ಯಕ್ರಮ ಇರುವ ಶಾಲೆಗಳ 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಖಾಸಗಿ ಅನುವಾದ ರಹಿತ ಶಾಲೆಗಳು ಸಲ್ಲಿಸಿದ್ದಂತ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ್ಯಾಯಪೀಠವು ಇಂದು ವಿಚಾರಣೆ ನಡೆಸಿತು.

ಈಗಾಗಲೇ ಶಿಕ್ಷಣ ಇಲಾಖೆ ಸೋಮವಾರ ಮತ್ತು ಮಂಗಳವಾರದಂದು ಎರಡು ವಿಷಯಗಳ ಪರೀಕ್ಷೆಗಳನ್ನು ನಡೆಸಿದೆ. ಹೀಗಾಗಿ ಇನ್ನುಳಿದ ವಿಷಯಗಳ 5, 8 ಮತ್ತು 9ನೇ ತರಗತಿ ವಿಷಯಗಳ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ಮುಂದುವರೆಸಿ ಆದೇಶಿಸಿದೆ. ಆದರೇ 11ನೇ ತರಗತಿ ಪರೀಕ್ಷೆಗಳು ಪೂರ್ಣಗೊಂಡಿರುವುದರಿಂದ ನ್ಯಾಯಪೀಠವು ಯಾವುದೇ ಆದೇಶ ಮಾಡಿಲ್ಲ.

Related posts

ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ

Suddi Udaya

ಧರ್ಮಸ್ಥಳ ಭಕ್ತರಿಂದ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ

Suddi Udaya

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 57ನೇ ಸಿನಿಮಾ ಬಹು ನಿರೀಕ್ಷಿತ ‘ದಿ ಡೆವಿಲ್’ ಸಿನಿಮಾದಲ್ಲಿ ಪುತ್ತೂರಿನ ಬೆಡಗಿ ರಚನಾ ರೈ ನಾಯಕಿಯಾಗಿ ಅಭಿನಯ

Suddi Udaya

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya
error: Content is protected !!