25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

ಬೆಳ್ತಂಗಡಿ; ಜಮೀಯತುಲ್ ಫಲಾಹ್ ಉಡುಪಿ – ದ‌.ಕ ಉಭಯ ಜಿಲ್ಲಾ ಕೇಂದ್ರ ಸಮಿತಿಯ ಮುಂದಿನ 2023-25 ನೇ ಸಾಲಿನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಘಟಕದ ಕೋಶಾಧಿಕಾರಿ, ಹಿರಿಯ ಸಾಮಾಜ ಸೇವಕ ಅಬ್ಬೋನು ಮದ್ದಡ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಕಾರ್ಯದರ್ಶಿಯಾಗಿದ್ದ ಕಾಸಿಂ ಬಾರ್ಕೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಈ ಆಯ್ಕೆ ನಡೆದಿದೆ.
ಕೇಂದ್ರ ಸಮಿತಿ ಅಧ್ಯಕ್ಷ ಕೆ.ಕೆ ಶಾಹುಲ್ ಹಮೀದ್ ಅವರ ಅಧ್ಯಕ್ಷತೆಯಲ್ಲಿ ಕಂಕನಾಡಿ ಕೇಂದ್ರ ಕಚೇರಿಯಲ್ಲಿ ನಡೆದ ಉಭಯ ಜಿಲ್ಲಾ ಎಲ್ಲಾ ತಾಲೂಕು ಘಟಕಗಳ ಪದಾಧಿಕಾರಿಗಳ ಸಾಮಾನ್ಯ ಸಭೆಯಲ್ಲಿ ಈ ಆಯ್ಕೆ ನಡೆದಿದೆ.


ಅಬ್ಬೋನು ಮದ್ದಡ್ಕ ಅವರು ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದಲ್ಲಿ ಕಳೆದ 30 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಕೋಶಾಧಿಕಾರಿಯಾಗಿ, ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಶಿಕ್ಷಣ, ರಾಜಕೀಯ ಮತ್ತು ಧಾರ್ಮಿಕ ಸಂಘಟನೆಗಳಲ್ಲಿ ತಮ್ಮನ್ನು ಪೂರ್ಣವಾಗಿ ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದಾರೆ.

Related posts

ಪುಂಜಾಲಕಟ್ಟೆ : ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya

ದ.ಕ. ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ನ ವತಿಯಿಂದ “ವೈದ್ಯರೊಂದಿಗೆ ಸಂವಾದ” ಕಾರ್ಯಕ್ರಮ

Suddi Udaya

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಪ್ರಕರಣ ದಾಖಲು

Suddi Udaya

ಉಜಿರೆ: ಪಾಂಡುರಂಗ ಕಾಕತ್ಕರ್ ನಿಧನ

Suddi Udaya
error: Content is protected !!