Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

ಬೆಳ್ತಂಗಡಿ; ಜಮೀಯತುಲ್ ಫಲಾಹ್ ಉಡುಪಿ – ದ‌.ಕ ಉಭಯ ಜಿಲ್ಲಾ ಕೇಂದ್ರ ಸಮಿತಿಯ ಮುಂದಿನ 2023-25 ನೇ ಸಾಲಿನ ಕಾರ್ಯದರ್ಶಿಯಾಗಿ ಬೆಳ್ತಂಗಡಿ ಘಟಕದ ಕೋಶಾಧಿಕಾರಿ, ಹಿರಿಯ ಸಾಮಾಜ ಸೇವಕ ಅಬ್ಬೋನು ಮದ್ದಡ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಕಾರ್ಯದರ್ಶಿಯಾಗಿದ್ದ ಕಾಸಿಂ ಬಾರ್ಕೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಈ ಆಯ್ಕೆ ನಡೆದಿದೆ.
ಕೇಂದ್ರ ಸಮಿತಿ ಅಧ್ಯಕ್ಷ ಕೆ.ಕೆ ಶಾಹುಲ್ ಹಮೀದ್ ಅವರ ಅಧ್ಯಕ್ಷತೆಯಲ್ಲಿ ಕಂಕನಾಡಿ ಕೇಂದ್ರ ಕಚೇರಿಯಲ್ಲಿ ನಡೆದ ಉಭಯ ಜಿಲ್ಲಾ ಎಲ್ಲಾ ತಾಲೂಕು ಘಟಕಗಳ ಪದಾಧಿಕಾರಿಗಳ ಸಾಮಾನ್ಯ ಸಭೆಯಲ್ಲಿ ಈ ಆಯ್ಕೆ ನಡೆದಿದೆ.


ಅಬ್ಬೋನು ಮದ್ದಡ್ಕ ಅವರು ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದಲ್ಲಿ ಕಳೆದ 30 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಕೋಶಾಧಿಕಾರಿಯಾಗಿ, ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಶಿಕ್ಷಣ, ರಾಜಕೀಯ ಮತ್ತು ಧಾರ್ಮಿಕ ಸಂಘಟನೆಗಳಲ್ಲಿ ತಮ್ಮನ್ನು ಪೂರ್ಣವಾಗಿ ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದಾರೆ.

Related posts

ಕಣಿಯೂರು: ವಿದ್ಯುತ್ ತಂತಿ ಸ್ಪರ್ಶಿಸಿ ನವಿಲು ಸಾವು

Suddi Udaya

ಮುಂಡಾಜೆ: ವಿದ್ಯುತ್ ಲೈನ್ ಮೇಲೆ ಬಿದ್ದ ಮರ: ಗುಡ್ಡಕ್ಕೆ ಬೆಂಕಿ

Suddi Udaya

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡ‌ರ್ ಹಸ್ತಾಂತರ

Suddi Udaya

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿ ಕೇಂದ್ರದ ಯೋಜನೆ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಟೆಂಡರ್

Suddi Udaya

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

Suddi Udaya

ನಡ ಗ್ರಾ.ಪಂ. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಅವಿರೋಧ ಆಯ್ಕೆ

Suddi Udaya
error: Content is protected !!