July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ತೋಟತ್ತಾಡಿ ಇದರ ವತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟವು ಸಂಘದ ವಠಾರ ಕೃಷ್ಣ ನಗರದಲ್ಲಿ ಗ್ರಾಮದ ಗುರಿಕಾರರಾದ ಕೃಷ್ಣಪ್ಪ ಗೌಡ ಅಗರಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.


ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಕೊರಗಪ್ಪ ಗೌಡ ಅರಣೆಪಾದೆ, ಚಾರ್ಮಾಡಿ ಕ್ರೀಡಾಕೂಟ ಉದ್ಘಾಟಿಸಿ ಶುಭ ಹಾರೈಸಿದರು.
ವೇದಿಕೆಯಲ್ಲಿ ತೋಟತ್ತಾಡಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನಿರ್ದೇಶಕರಾದ ಜಯಂತಿ ಕುಶಾಲಪ್ಪ ಗೌಡ, ಚಾರ್ಮಾಡಿ ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾದ ಸುರೇಖಾ ಪ್ರಸಾದ್ ಮಡೀರು, ರಾಮಣ್ಣ ಗೌಡ ಏಡಿಯಾರು, ನೀಲಯ್ಯ ಗೌಡ ಮಡೀರು, ಕೃಷ್ಣಪ್ಪ ಗೌಡ ಜಾಕೇಡಿ ಉಪಸ್ಥಿತರಿದ್ದರು.

ಪುರುಷರಿಗೆ ವಾಲಿಬಾಲ್, ಹಗ್ಗಜಗ್ಗಾಟ, ಮಹಿಳೆಯರಿಗೆ ತ್ರೋಬಾಲ್, ಹಗ್ಗಜಗ್ಗಾಟ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆ ಏರ್ಪಡಿಸಲಾಯಿತು.

ಸಂಜೆ ಸಮಾರೋಪ ಸಮಾರಂಭವು ಸಂಘದ ಅಧ್ಯಕ್ಷರಾದ ಗೋಪಾಲಕೃಷ್ಣ ಗೌಡ ಮಡೀರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ವೇದಿಕೆಯಲ್ಲಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಉಪಾಧ್ಯಕ್ಷರಾದ ನಾರಾಯಣ ಗೌಡ, ಯುವ ವೇದಿಕೆ ಅಧ್ಯಕ್ಷರಾದ ನವೀನ್ ಗೌಡ ಬಾಯಿತ್ಯಾರು ಉಪಸ್ಥಿತರಿದ್ದರು.

Related posts

ರೇಷ್ಮೆರೋಡ್: ಅಶ್ವತನಗರ ನವರಾತ್ರಿ ಪೂಜೆ

Suddi Udaya

ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಉಜಿರೆ, ಬೆಳಾಲು, ಮಾಯಾ, ಕೊಲ್ಪಾಡಿ ಗ್ರಾಮದ ಭಕ್ತಾಧಿಗಳಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಹೆಗ್ಡೆ ಆಯ್ಕೆ

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜು ಡಿಪ್ಲೋಮಾ ಫ್ಯಾಶನ್ ಡಿಸೈನಿಂಗ್ ವಿದ್ಯಾರ್ಥಿಗಳಿಂದ ಬೆಳ್ತಂಗಡಿಯ ನೂರಾ ಗೋಲ್ಡ್‌ಗೆ ಭೇಟಿ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

Suddi Udaya
error: Content is protected !!