24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಬೆಳೆ ಸಾಲ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲ:ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಆಗ್ರಹ

ಬೆಳ್ತಂಗಡಿ: ರೈತರಿಗೆ ಸಹಕಾರ ಸಂಘಗಳ ಮೂಲಕ ನೀಡುವ ಬೆಳೆ ಸಾಲವನ್ನು ರೂ. 3 ಲಕ್ಷ ದಿಂದ 5 ಲಕ್ಷ ರೂ.ವರೆಗೆ ಏರಿಸಲಾಗಿದ್ದರೂ ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಈ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲವಾಗಿದೆ. ಇದಕ್ಕಾಗಿ ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಯೋಜನೆಯ ಬಗ್ಗೆ ಸೆ. 12 ರಂದು ಸಹಕಾರ ಇಲಾಖೆ ಮೂಲಕ ಆದೇಶ ಮಾಡಲಾಗಿದೆ. ಆದರೆ ಈ ಸಾಲ ನೀಡಲು ಅಗತ್ಯವಿರುವ ನಿಧಿಯನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ. ಇದರಿಂದ ಹೆಚ್ಚಿಸಿರುವ ಸಾಲದ ಮೊತ್ತವನ್ನು ಸಹಕಾರ ಸಂಘಗಳು ಸ್ವಂತ ನಿಧಿಯಿಂದ ನೀಡಬೆಕಾಗಿದೆ. ಸಾವಿರಾರು ಸದಸ್ಯರಿಗೆ ಸ್ವಂತ ನಿಧಿಯಿಂದ ಸಾಲ ನೀಡಿದರೆ ಅದು ಸಹಕಾರ ಸಂಘಗಳ ವ್ಯವಹಾರದ ಮೇಲೆ ವ್ಯತರಿಕ್ತ ಪರಿಣಾಮ ಬೀರಲಿದೆ. ಈ ಕಾರಣದಿಂದ ಸಹಕಾರ ಸಂಘಗಳು ಹೆಚ್ಚಿನ ಸಾಲದ ಪ್ರಮಾಣದ ಮೊತ್ತವನ್ನು ರೈತರಿಗೆ ನೀಡಲು ಹಿಂದೇಟು ಹಾಕುತ್ತಿವೆ. ಇದರಿಂದ ಸರಕಾರ ಯೋಜನೆ ಘೋಷಿಸಿದ್ದರೂ ಇದು ಜಿಲ್ಲೆಯ ಮಟ್ಟಿಗೆ ಫಲಾನುಭವಿಗಳನ್ನು ತಲುಪದ ಯೋಜನೆಯಾಗಿ ಮುಂದುವರಿದಿದೆ. ಹೀಗಾಗಿ ಇದಕ್ಕೆ ಬೇಕಾಗುವ ನಿಧಿಯನ್ನು ಕೂಡಲೆ ಬಿಡುಗಡೆಗೊಳಿಸಿ ರೈತರರಿಗೆ ನೆರವಾಗಬೇಕೆಂದು ಮಾ.7 ರಂದು ಅವರು ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Related posts

ಮಚ್ಚಿನ: ಬಳ್ಳಮಂಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಾಶಿಪಟ್ಣ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ದ್ವಿತೀಯ ಪಿಯು ಫಲಿತಾಂಶ: ಅರಸಿನಮಕ್ಕಿ ಪದವಿ ಪೂರ್ವ ಕಾಲೇಜಿಗೆ ಶೇ. 84.6 ಫಲಿತಾಂಶ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ‘ಮುಳಿಯ ಚಿನ್ನೋತ್ಸವ’ ವಿಶ್ವ ವಿನೂತನ ಚಿನ್ನಾಭರಣಗಳ ಹಬ್ಬಕ್ಕೆ ಚಾಲನೆ

Suddi Udaya

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

Suddi Udaya

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!