July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಬೆಳೆ ಸಾಲ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲ:ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಆಗ್ರಹ

ಬೆಳ್ತಂಗಡಿ: ರೈತರಿಗೆ ಸಹಕಾರ ಸಂಘಗಳ ಮೂಲಕ ನೀಡುವ ಬೆಳೆ ಸಾಲವನ್ನು ರೂ. 3 ಲಕ್ಷ ದಿಂದ 5 ಲಕ್ಷ ರೂ.ವರೆಗೆ ಏರಿಸಲಾಗಿದ್ದರೂ ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಈ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲವಾಗಿದೆ. ಇದಕ್ಕಾಗಿ ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಯೋಜನೆಯ ಬಗ್ಗೆ ಸೆ. 12 ರಂದು ಸಹಕಾರ ಇಲಾಖೆ ಮೂಲಕ ಆದೇಶ ಮಾಡಲಾಗಿದೆ. ಆದರೆ ಈ ಸಾಲ ನೀಡಲು ಅಗತ್ಯವಿರುವ ನಿಧಿಯನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ. ಇದರಿಂದ ಹೆಚ್ಚಿಸಿರುವ ಸಾಲದ ಮೊತ್ತವನ್ನು ಸಹಕಾರ ಸಂಘಗಳು ಸ್ವಂತ ನಿಧಿಯಿಂದ ನೀಡಬೆಕಾಗಿದೆ. ಸಾವಿರಾರು ಸದಸ್ಯರಿಗೆ ಸ್ವಂತ ನಿಧಿಯಿಂದ ಸಾಲ ನೀಡಿದರೆ ಅದು ಸಹಕಾರ ಸಂಘಗಳ ವ್ಯವಹಾರದ ಮೇಲೆ ವ್ಯತರಿಕ್ತ ಪರಿಣಾಮ ಬೀರಲಿದೆ. ಈ ಕಾರಣದಿಂದ ಸಹಕಾರ ಸಂಘಗಳು ಹೆಚ್ಚಿನ ಸಾಲದ ಪ್ರಮಾಣದ ಮೊತ್ತವನ್ನು ರೈತರಿಗೆ ನೀಡಲು ಹಿಂದೇಟು ಹಾಕುತ್ತಿವೆ. ಇದರಿಂದ ಸರಕಾರ ಯೋಜನೆ ಘೋಷಿಸಿದ್ದರೂ ಇದು ಜಿಲ್ಲೆಯ ಮಟ್ಟಿಗೆ ಫಲಾನುಭವಿಗಳನ್ನು ತಲುಪದ ಯೋಜನೆಯಾಗಿ ಮುಂದುವರಿದಿದೆ. ಹೀಗಾಗಿ ಇದಕ್ಕೆ ಬೇಕಾಗುವ ನಿಧಿಯನ್ನು ಕೂಡಲೆ ಬಿಡುಗಡೆಗೊಳಿಸಿ ರೈತರರಿಗೆ ನೆರವಾಗಬೇಕೆಂದು ಮಾ.7 ರಂದು ಅವರು ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Related posts

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಧನಲಕ್ಷ್ಮೀ ಪೂಜೆ, ಗೋ ಪೂಜೆ, ವಾಹನ ಪೂಜೆ ,ಆಯುಧ ಪೂಜೆ ಹಾಗೂ ಹೆಣ್ಣು ಕರು ದಾನ ಕಾರ್ಯಕ್ರಮ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ವೇಣೂರು : 25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಾಲೋಚನಾ ಸಭೆ

Suddi Udaya
error: Content is protected !!