23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಬೆಳೆ ಸಾಲ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲ:ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಆಗ್ರಹ

ಬೆಳ್ತಂಗಡಿ: ರೈತರಿಗೆ ಸಹಕಾರ ಸಂಘಗಳ ಮೂಲಕ ನೀಡುವ ಬೆಳೆ ಸಾಲವನ್ನು ರೂ. 3 ಲಕ್ಷ ದಿಂದ 5 ಲಕ್ಷ ರೂ.ವರೆಗೆ ಏರಿಸಲಾಗಿದ್ದರೂ ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಈ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲವಾಗಿದೆ. ಇದಕ್ಕಾಗಿ ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಯೋಜನೆಯ ಬಗ್ಗೆ ಸೆ. 12 ರಂದು ಸಹಕಾರ ಇಲಾಖೆ ಮೂಲಕ ಆದೇಶ ಮಾಡಲಾಗಿದೆ. ಆದರೆ ಈ ಸಾಲ ನೀಡಲು ಅಗತ್ಯವಿರುವ ನಿಧಿಯನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ. ಇದರಿಂದ ಹೆಚ್ಚಿಸಿರುವ ಸಾಲದ ಮೊತ್ತವನ್ನು ಸಹಕಾರ ಸಂಘಗಳು ಸ್ವಂತ ನಿಧಿಯಿಂದ ನೀಡಬೆಕಾಗಿದೆ. ಸಾವಿರಾರು ಸದಸ್ಯರಿಗೆ ಸ್ವಂತ ನಿಧಿಯಿಂದ ಸಾಲ ನೀಡಿದರೆ ಅದು ಸಹಕಾರ ಸಂಘಗಳ ವ್ಯವಹಾರದ ಮೇಲೆ ವ್ಯತರಿಕ್ತ ಪರಿಣಾಮ ಬೀರಲಿದೆ. ಈ ಕಾರಣದಿಂದ ಸಹಕಾರ ಸಂಘಗಳು ಹೆಚ್ಚಿನ ಸಾಲದ ಪ್ರಮಾಣದ ಮೊತ್ತವನ್ನು ರೈತರಿಗೆ ನೀಡಲು ಹಿಂದೇಟು ಹಾಕುತ್ತಿವೆ. ಇದರಿಂದ ಸರಕಾರ ಯೋಜನೆ ಘೋಷಿಸಿದ್ದರೂ ಇದು ಜಿಲ್ಲೆಯ ಮಟ್ಟಿಗೆ ಫಲಾನುಭವಿಗಳನ್ನು ತಲುಪದ ಯೋಜನೆಯಾಗಿ ಮುಂದುವರಿದಿದೆ. ಹೀಗಾಗಿ ಇದಕ್ಕೆ ಬೇಕಾಗುವ ನಿಧಿಯನ್ನು ಕೂಡಲೆ ಬಿಡುಗಡೆಗೊಳಿಸಿ ರೈತರರಿಗೆ ನೆರವಾಗಬೇಕೆಂದು ಮಾ.7 ರಂದು ಅವರು ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ :ಪುದುವೆಟ್ಟು ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಣಿತಾ ಭಜನೆಯಲ್ಲಿ ಶ್ರೀ ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ತಂಡಕ್ಕೆ ಪ್ರಥಮ ಸ್ಥಾನ

Suddi Udaya

ಶ್ರೀ ಕ್ಷೇತ್ರ ಮಂಗಳಗಿರಿಯ ಆಡಳಿತ ಮೋಕ್ತೇಸರಾದ ರಾಜೀವ ಇವರ ವತಿಯಿಂದ ಮುಂಡೂರು ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ

Suddi Udaya

ಯೂಟ್ಯೂಬರ್ಸ್ ಹಾಗೂ ಖಾಸಗಿ ಚಾನೆಲ್ ವರದಿಗಾರನ ಮೇಲೆ ಹಲ್ಲೆ ಆರೋಪ: ಸ್ಥಳದಲ್ಲಿ ಜನ ಜಮಾಯಿಸಿ ಉದ್ವಿಗ್ನ ಸ್ಥಿತಿ- ಪೊಲೀಸರಿಂದ ಲಾಠಿ ಚಾರ್ಜ್. ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ: ಎಸ್.ಪಿ

Suddi Udaya

ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

Suddi Udaya

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

Suddi Udaya
error: Content is protected !!