September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಬೆಳೆ ಸಾಲ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲ:ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಆಗ್ರಹ

ಬೆಳ್ತಂಗಡಿ: ರೈತರಿಗೆ ಸಹಕಾರ ಸಂಘಗಳ ಮೂಲಕ ನೀಡುವ ಬೆಳೆ ಸಾಲವನ್ನು ರೂ. 3 ಲಕ್ಷ ದಿಂದ 5 ಲಕ್ಷ ರೂ.ವರೆಗೆ ಏರಿಸಲಾಗಿದ್ದರೂ ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಈ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲವಾಗಿದೆ. ಇದಕ್ಕಾಗಿ ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಯೋಜನೆಯ ಬಗ್ಗೆ ಸೆ. 12 ರಂದು ಸಹಕಾರ ಇಲಾಖೆ ಮೂಲಕ ಆದೇಶ ಮಾಡಲಾಗಿದೆ. ಆದರೆ ಈ ಸಾಲ ನೀಡಲು ಅಗತ್ಯವಿರುವ ನಿಧಿಯನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ. ಇದರಿಂದ ಹೆಚ್ಚಿಸಿರುವ ಸಾಲದ ಮೊತ್ತವನ್ನು ಸಹಕಾರ ಸಂಘಗಳು ಸ್ವಂತ ನಿಧಿಯಿಂದ ನೀಡಬೆಕಾಗಿದೆ. ಸಾವಿರಾರು ಸದಸ್ಯರಿಗೆ ಸ್ವಂತ ನಿಧಿಯಿಂದ ಸಾಲ ನೀಡಿದರೆ ಅದು ಸಹಕಾರ ಸಂಘಗಳ ವ್ಯವಹಾರದ ಮೇಲೆ ವ್ಯತರಿಕ್ತ ಪರಿಣಾಮ ಬೀರಲಿದೆ. ಈ ಕಾರಣದಿಂದ ಸಹಕಾರ ಸಂಘಗಳು ಹೆಚ್ಚಿನ ಸಾಲದ ಪ್ರಮಾಣದ ಮೊತ್ತವನ್ನು ರೈತರಿಗೆ ನೀಡಲು ಹಿಂದೇಟು ಹಾಕುತ್ತಿವೆ. ಇದರಿಂದ ಸರಕಾರ ಯೋಜನೆ ಘೋಷಿಸಿದ್ದರೂ ಇದು ಜಿಲ್ಲೆಯ ಮಟ್ಟಿಗೆ ಫಲಾನುಭವಿಗಳನ್ನು ತಲುಪದ ಯೋಜನೆಯಾಗಿ ಮುಂದುವರಿದಿದೆ. ಹೀಗಾಗಿ ಇದಕ್ಕೆ ಬೇಕಾಗುವ ನಿಧಿಯನ್ನು ಕೂಡಲೆ ಬಿಡುಗಡೆಗೊಳಿಸಿ ರೈತರರಿಗೆ ನೆರವಾಗಬೇಕೆಂದು ಮಾ.7 ರಂದು ಅವರು ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

Related posts

ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ “ಸಿಂದೂರ”ಲೋಕಾರ್ಪಣೆ

Suddi Udaya

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಏಳು ವರ್ಷದ ಎಕ್ಸೆಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

Suddi Udaya

ಪ್ರಯೋಜನಕ್ಕೆ ಬಾರದ ಜಿಯೋ ಟವರ್ ಗಳು: ಎರಡು ವರ್ಷಗಳಿಂದ ಭೂ ಮಾಲೀಕರಿಗೆ ಬಾಡಿಗೆ ನೀಡದ ಸಂಸ್ಥೆ: ನೆಟ್ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ವ್ಯಾಪಾರಸ್ಥರು

Suddi Udaya

ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ನಿವೃತ್ತ ಸೈನಿಕ ಕೆ. ಮಹಾಬಲ ಕಾಂತ್ರೇಲು ಮತ್ತು ಹಿರಿಯ ಪಶು ವೈದ್ಯ ಯಾದವ ಗೌಡ ರವರಿಗೆ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಧ್ಯಕ್ಷತೆ ಮತ್ತು ಸಂಸದೀಯ ಕಾರ್ಯವಿಧಾನಗಳ ತರಬೇತಿ ಕಾರ್ಯಾಗಾರ

Suddi Udaya

ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರಕ್ಕೆ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya
error: Content is protected !!