23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

ಬಂದಾರು :ಬಂದಾರು ಗ್ರಾಮ ಪಂಚಾಯತ್ ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಸಹಯೋಗದೊಂದಿಗೆ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮ ಸಭೆ ಪಂಚಾಯತ್ ಸಭಾಂಗಣದಲ್ಲಿ ಮಾ 11 ರಂದು ನಡೆಯಿತು.


ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಮತ್ತು ಸಿದ್ಧಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಹಾಲಕ್ಷ್ಮಿ ಯವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಎನ್ಆರ್.ಎಲ್.ಎಮ್ ಬೆಳ್ತಂಗಡಿ ತಾ ಪಂ ನ ವಲಯ ಮೇಲ್ವಚಾರಕಿ ವೀಣಾ ಎನ್ಆರ್.ಎಲ್.ಎಮ್ ಸಂಜೀವಿನಿ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ನಂತರ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ರಾಜ್ಯ ಮಟ್ಟದ ಸಾಹಿತ್ಯ ಕ್ಷೇತ್ರದಲ್ಲಿ ಕವನ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಧೃತಿ . ಎನ್.ಡಿ ಇವರಿಗೆ ಗ್ರಾ . ಪಂ ಹಾಗೂ ಒಕ್ಕೂಟದ ವತಿಯಿಂದ ಸನ್ಮಾನ ಮಾಡಲಾಯಿತು.

ನೂತನ ಪದಾಧಿಕಾರಿಗಳ ಪದಗ್ರಹಣವನ್ನು ತಾಲೂಕು ಪಂಚಾಯತ್ ನ ಎನ್ಆರ್.ಎಲ್.ಎಮ್ ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ ನೆರವೇರಿಸಿಕೊಟ್ಟರು . ಮಾಜಿ ಪದಾಧಿಕಾರಿಗಳಿಗೆ ಗೌರವ ಸ್ಮರಣಿಕೆ ನೀಡಿ ಬೀಳ್ಕೊಡುಗೆ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು,ಪಂಚಾಯತ್ ಉಪಾಧ್ಯಕ್ಷರಾದ ಪುಷ್ಪಾವತಿ ಹಾಗೂ ಗ್ರಾ.ಪಂ ನ ಸದಸ್ಯರು. ಮತ್ತು ಸಂಜೀವಿನಿ ಸಂಘಗಳ ಸದಸ್ಯರುಗಳು ಉಪಸ್ಥಿತರಿದ್ದರು.

ಎಲ್.ಸಿ.ಆರ್.ಪಿ ಭಾಗ್ಯಶ್ರೀ ನಿರೂಪಿಸಿ, ಪ್ರಾರ್ಥಿಸಿದರು, ಎಂಬಿಕೆ ಮೇಘನ ರವರು ಸ್ವಾಗತಿಸಿದರು , ಎಲ್.ಸಿ.ಆರ್.ಪಿ ಪವಿತ್ರ ಜಮಾ-ಖರ್ಚು ಮಂಡನೆ ಮಾಡಿ ಸದಸ್ಯರಿಂದ ಅನುಮೋದನೆ ಪಡೆದರು .ಎಮ್.ಬಿ.ಕೆ ಮೇಘನ ವಾರ್ಷಿಕ ವರದಿ ಮಂಡನೆ ಮಾಡಿ ಸದಸ್ಯರಿಂದ ಅನುಮೋದನೆ ಪಡೆದರು. ಬಿ.ಸಿ ಸಖಿ ಲಕ್ಷ್ಮೀ ವಂದಿಸಿದರು .

Related posts

ಗುರುವಾಯನಕೆರೆ: ಎಕ್ಸೆಲ್‌ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಹಾಗೂ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಸುಲ್ಕೇರಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ

Suddi Udaya

ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಅಶ್ವಮೇಧ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!