ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

ಬಂದಾರು :ಬಂದಾರು ಗ್ರಾಮ ಪಂಚಾಯತ್ ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಸಹಯೋಗದೊಂದಿಗೆ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮ ಸಭೆ ಪಂಚಾಯತ್ ಸಭಾಂಗಣದಲ್ಲಿ ಮಾ 11 ರಂದು ನಡೆಯಿತು.


ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಮತ್ತು ಸಿದ್ಧಿವಿನಾಯಕ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಹಾಲಕ್ಷ್ಮಿ ಯವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಎನ್ಆರ್.ಎಲ್.ಎಮ್ ಬೆಳ್ತಂಗಡಿ ತಾ ಪಂ ನ ವಲಯ ಮೇಲ್ವಚಾರಕಿ ವೀಣಾ ಎನ್ಆರ್.ಎಲ್.ಎಮ್ ಸಂಜೀವಿನಿ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ನಂತರ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ರಾಜ್ಯ ಮಟ್ಟದ ಸಾಹಿತ್ಯ ಕ್ಷೇತ್ರದಲ್ಲಿ ಕವನ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಧೃತಿ . ಎನ್.ಡಿ ಇವರಿಗೆ ಗ್ರಾ . ಪಂ ಹಾಗೂ ಒಕ್ಕೂಟದ ವತಿಯಿಂದ ಸನ್ಮಾನ ಮಾಡಲಾಯಿತು.

ನೂತನ ಪದಾಧಿಕಾರಿಗಳ ಪದಗ್ರಹಣವನ್ನು ತಾಲೂಕು ಪಂಚಾಯತ್ ನ ಎನ್ಆರ್.ಎಲ್.ಎಮ್ ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ ನೆರವೇರಿಸಿಕೊಟ್ಟರು . ಮಾಜಿ ಪದಾಧಿಕಾರಿಗಳಿಗೆ ಗೌರವ ಸ್ಮರಣಿಕೆ ನೀಡಿ ಬೀಳ್ಕೊಡುಗೆ ಮಾಡಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು,ಪಂಚಾಯತ್ ಉಪಾಧ್ಯಕ್ಷರಾದ ಪುಷ್ಪಾವತಿ ಹಾಗೂ ಗ್ರಾ.ಪಂ ನ ಸದಸ್ಯರು. ಮತ್ತು ಸಂಜೀವಿನಿ ಸಂಘಗಳ ಸದಸ್ಯರುಗಳು ಉಪಸ್ಥಿತರಿದ್ದರು.

ಎಲ್.ಸಿ.ಆರ್.ಪಿ ಭಾಗ್ಯಶ್ರೀ ನಿರೂಪಿಸಿ, ಪ್ರಾರ್ಥಿಸಿದರು, ಎಂಬಿಕೆ ಮೇಘನ ರವರು ಸ್ವಾಗತಿಸಿದರು , ಎಲ್.ಸಿ.ಆರ್.ಪಿ ಪವಿತ್ರ ಜಮಾ-ಖರ್ಚು ಮಂಡನೆ ಮಾಡಿ ಸದಸ್ಯರಿಂದ ಅನುಮೋದನೆ ಪಡೆದರು .ಎಮ್.ಬಿ.ಕೆ ಮೇಘನ ವಾರ್ಷಿಕ ವರದಿ ಮಂಡನೆ ಮಾಡಿ ಸದಸ್ಯರಿಂದ ಅನುಮೋದನೆ ಪಡೆದರು. ಬಿ.ಸಿ ಸಖಿ ಲಕ್ಷ್ಮೀ ವಂದಿಸಿದರು .

Related posts

ಅಸ್ವಸ್ಥಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಶೌರ್ಯ ತಂಡದ ಸದಸ್ಯರು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ಪ್ರಾಧ್ಯಾಪಕ ಡಾ. ಶರತ್ ಕುಮಾರ್ ಟಿ ಕೆ ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಮತ್ತು ಎಸ್.ಡಿ.ಎಂ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಜಂಟಿ ಆಶ್ರಯ:ಬೆಳ್ತಂಗಡಿ ಸಂತಕಟ್ಟೆ ಮತ್ತು ಬಸ್ ನಿಲ್ದಾಣದ ಬಳಿ ಮತದಾನ ಜಾಗೃತಿ ಬೀದಿ ನಾಟಕ

Suddi Udaya

ಪಿಲಿಚಾಮುಂಡಿಕಲ್ಲು ದೊಂಪದಬಲಿ ಉತ್ಸವ ಸಮಿತಿಯ ನಿಕಟಪೂರ್ವ ಉಪಾಧ್ಯಕ್ಷ ವಿಶ್ವನಾಥ ಕೋಟ್ಯಾನ್ ನಿಧನ

Suddi Udaya

ಮದ್ದಡ್ಕ: ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ

Suddi Udaya
error: Content is protected !!