23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಡಂತ್ಯಾರು: ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಲ್ಲಿ ಪ್ರತಿಭಟನೆ

ಮಚ್ಚಿನ ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಹಾಗೂ ಊರ ಗ್ರಾಮಸ್ಥರಿಂದ ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಯಲ್ಲಿ ಪ್ರತಿಭಟನೆ ಮಾ.12 ರಂದು ನಡೆಯಿತು.

ಮಚ್ಚಿನ ಗ್ರಾಮ ಪಂಚಾಯತ್ ಹಾಗೂ ಮಡಂತ್ಯಾರು ಗ್ರಾಮ ಪಂಚಾಯತಿಗೆ ಸೇರಿದ ಬಂಗೇರಕಟ್ಟೆ ನೆತ್ತರ ಜಂಟಿ ರಸ್ತೆಯು ತೀರ ಅದಕ್ಕೆಟ್ಟಿದ್ದು ಸಂಚಾರಕ್ಕೆ ಕಷ್ಟದ ಸ್ಥಿತಿಯಲ್ಲಿ ಇರುವ ಈ ರಸ್ತೆಯು ದುರಸ್ತಿ ಹಾಗೂ ಡಾಮಾರೀಕರಣಕ್ಕೆ, ದಾರಿದೀಪ ಚರಂಡಿ ದುರಸ್ತಿಗಳ ಬಗ್ಗೆ ಭಾಗ್ಯಶ್ರೀ ಮಿತ್ರ ಮಂಡಳಿ ಹಾಗೂ ಊರವರಿಂದ ನೆತ್ತರದಿಂದ ಮಚ್ಚಿನ ಮಡಂತ್ಯಾರು ಗ್ರಾಮ ಪಂಚಾಯತಿಗಳಿಗೆ ಕಾಲ್ನಡಿಗೆಯ ಮೂಲಕ ಪ್ರತಿಭಟನೆ ನಡೆಯಿತು.

ಭರವಸೆ ಒಂದೇ ಸಾಲದು ಅಭಿವೃದ್ಧಿಯೆಂದು ಸ್ವಾಮಿ?. ಕಣ್ಣು ಮುಚ್ಚಿ ಕೂತಿರುವ ಎರಡು ಗ್ರಾಮ ಪಂಚಾಯಿತಿಗಳ / ಜನಪ್ರತಿನಿಧಿಗಳ ಕಣ್ಣು ತೆರೆಯಲು ಈ ನಮ್ಮ ಪ್ರತಿಭಟನೆ. ಮನವಿಗೆ ಲೆಕ್ಕಿಸದ ಗ್ರಾಮ ಪಂಚಾಯಿತಿಗಳಿಗೆ ಬೆವರು ಸುರಿಸಿ ಕಾಲ್ನಡಿಗೆಯ ಈ ನಮ್ಮ ಪ್ರತಿಭಟನೆ. ಇದಕ್ಕೂ ಲೆಕ್ಕಿಸದೆ ಇದ್ದಲ್ಲಿ ರಕ್ತಸುರಿಸಿ ಪ್ರತಿಭಟನೆ ನಡೆಸೆ ನಡೆಸುತ್ತೇವೆ ಚುನಾವಣೆಗೆ ಮುನ್ನ ರಸ್ತೆಯ ಅಭಿವೃದ್ಧಿ ನಡೆಸದೆ ಇದ್ದಲ್ಲಿ ಸಂಘ ಸಂಸ್ಥೆ ಊರವರಿಂದ ಉಗ್ರ ಹೋರಾಟ ನಡೆಸುತ್ತೇವೆ ಎಂದು ಮನವಿ ಹಾಗೂ ಬ್ಯಾನರ್ ಗಳನ್ನು ಅಳವಡಿಸಲಾಯಿತು.

ಮನವಿಯನ್ನು ಮಚ್ಚಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರಿಗೆ ಹಾಗೂ ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮನವಿ ನೀಡಿದರು.

ಈ ಸಂದರ್ಭದಲ್ಲಿ ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ವಿಶ್ವನಾಥ ಪೂಜಾರಿ, ಗೋಪಾಲಕೃಷ್ಣ, ಕಿಶೋರ್ ಶೆಟ್ಟಿ, ಮಚ್ಚಿನ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಮೋದ್ ಕುಮಾರ್, ಭಾಗ್ಯಶ್ರೀ ಮಿತ್ರ ಮಂಡಳಿಯ ಅಧ್ಯಕ್ಷರಾದ ಸಂತೋಷ್, ಕಾರ್ಯದರ್ಶಿ ಪ್ರಮೋದ್ ಕೋಡಿ, ಮಹಾಬಲ ನೆತ್ತರ, ಗೋಪಾಲ ಶೆಟ್ಟಿ, ಕೃಷ್ಣಪ್ಪ ಸಾಲ್ಯಾನ್, ಕೃಷ್ಣಪ್ಪ ಪೂಜಾರಿ, ಶಿವಪ್ಪ ಪೂಜಾರಿ, ಸದಸ್ಯರು ಹಾಗೂ ಊರ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

“ನಾರಿ ಇನ್ ಪಿಂಕ್ ಸಾರಿ” ಕ್ಯಾನ್ಸರ್ ಜಾಗೃತಿ ಜಾಥಾ ಮತ್ತು ಕ್ಯಾನ್ಸರ್ ಮಾಹಿತಿ ಕಾರ್ಯಕ್ರಮಕ್ಕೆ ಜೆಸಿಐ ಭಾರತದಿಂದ ಬೆಳ್ತಂಗಡಿ ಜೆಸಿಐ ಗೆ ವಿಶೇಷ ಮನ್ನಣೆ

Suddi Udaya

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆ ಹುಡುಗರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

Suddi Udaya

ಸಂಸತ್ತಿನಲ್ಲೇ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ತಮ್ಮ ದೇಶದ ಜನರೆದುರು ಕ್ಷಮೆಯಾಚಿಸಲಿ: ರಕ್ಷಿತ್ ಶಿವರಾಂ

Suddi Udaya

ತುಳು ಹಾಗೂ ಜವಾರಿ ಭಾಷೆಯಲ್ಲಿ ಹಾಲಿವುಡ್‌ ಸಿನಿಮಾಗಳ ವೈಭವ:ಕನ್ನಡಿಗರ ‘ಟಾಕೀಸ್’ ಆ್ಯಪ್ ಓಟಿಟಿಯಿಂದ ಹೊಸ ಇತಿಹಾಸ

Suddi Udaya

ಧರ್ಮಸ್ಥಳದ ಕು. ಸೌಖ್ಯ ಎಸ್. ಜೈನ್ ಮಂಡಿಸಿದ ಸಂಶೋಧನಾ ಪ್ರಬಂಧಗಳು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

Suddi Udaya
error: Content is protected !!