April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ14-15 ಎಸ್.ಡಿ.ಎಂ ಝೇಂಕಾರ ಉತ್ಸವ: ಖ್ಯಾತ ನಟ ರಮೇಶ್ ಅರವಿಂದ್ ವಿಶೇಷ ಆಕರ್ಷಣೆ

ಉಜಿರೆ: ಯುವ ಪ್ರತಿಭಾನ್ವಿತರ ಕಲಾತ್ಮಕ ಅಭಿವ್ಯಕ್ತಿಗೆ ವೇದಿಕೆ ಒದಗಿಸಿಕೊಡುವ ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದ ಪ್ರಸಕ್ತ ವರ್ಷದ ಝೇಂಕಾರದ ಐದನೇ ಆವೃತ್ತಿಯ ಸಾಂಸ್ಕೃತಿಕ ಉತ್ಸವ ಮಾ.14-15 ರಂದು ನಡೆಯಲಿದೆ. ಈ ಸಲದ ಪ್ರಮುಖ ಆಕರ್ಷಣೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಗಮನ ಸೆಳೆಯಲಿದ್ದಾರೆ.

ಪ್ರತಿವರ್ಷವೂ ಆಯೋಜಿತವಾಗುವ ಝೇಂಕಾರ ಸ್ಟಾರ್ ನೈಟ್‌ಗೆ ಖ್ಯಾತ ಜನಪ್ರಿಯ ನಟರು ಆಗಮಿಸುತ್ತಾರೆ. ಬೆಳೆಗಿನ ಅವಧಿಯಲ್ಲಿ ಉತ್ಸವಕ್ಕೆ ಚಾಲನೆ ನೀಡಿದ ನಂತರ ವಿವಿಧ ಸ್ಪರ್ಧೆಗಳು ಎರಡು ದಿನಗಳ ಕಾಲ ಆಯೋಜಿತವಾಗಲಿವೆ. ಆರಂಭದ ದಿನ ಸಂಜೆ ನಡೆಯುವ ಸ್ಟಾರ್‌ನೈಟ್ ಕಾರ್ಯಕ್ರಮವನ್ನು ರಮೇಶ್ ಅರವಿಂದ್ ನಡೆಸಿಕೊಡಲಿದ್ದಾರೆ.

ಮಾಕ್ ಪ್ರೆಸ್, ಪ್ರೊ ಪ್ರೆಸೆಂಟರ್, ಕಲರ್ ಫುಲ್ ಕ್ಯಾನವಾಸ್ ಶೀರ್ಷಿಕೆಯ ವೈಯುಕ್ತಿಕ ವಿಭಾಗದ ಸ್ಪರ್ಧೆಗಳು ನಡೆಯಲಿವೆ. ಗ್ರುಪ್ ಇವೆಂಟ್ ವಿಭಾಗದಲ್ಲಿ ಸಮೂಹ ನೃತ್ಯ, ಫ್ಯಾಷನ್ ಪರೇಡ್, ರಸಪ್ರಶ್ನೆ, ಔಟ್ ಡೋರ್ ಇವೆಂಟ್ ವಿಭಾಗದಲ್ಲಿ ಗಲ್ಲಿ ಕ್ರಿಕೆಟ್ ಪಂದ್ಯಾವಳಿ, ಸ್ಪಾಟ್ ಇವೆಂಟ್ ವಿಭಾಗದಲ್ಲಿ ರೀಲ್ ಮೇಕಿಂಗ್, ಸ್ಪಾಟ್ ಫೋಟೋಗ್ರಫಿ ಸ್ಪರ್ಧೆಗಳು ಏರ್ಪಡಲಿವೆ.

ರಾಜ್ಯದ ವಿವಿಧೆಡೆಗಳಿಂದ 40ಕ್ಕೂ ಹೆಚ್ಚು ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಎರಡು ದಿನಗಳ ಕಾಲ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಅಂಗಳ ವೈವಿಧ್ಯಮಯ ಸ್ಪರ್ಧೆಗಳಲ್ಲಿ ಭಾಗವಹಿಸುವ ಪ್ರತಿಭಾನ್ವಿತ ಯುವ ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣದ ವೇದಿಕೆಯಾಗಿ ಕಂಗೊಳಿಸಲಿದೆ. ವಿವಿಧ ವಿಭಾಗಗಳ ಸ್ಪರ್ಧೆಗಳಲ್ಲಿ ವಿಜೇತರಾಗುವ ವಿದ್ಯಾರ್ಥಿಗಳು ಒಂದು ಲಕ್ಷ ರೂ. ಮೌಲ್ಯದ ವಿವಿಧ ಬಹುಮಾನಗಳನ್ನು ಪಡೆಯಲಿದ್ದಾರೆ.

Related posts

ಮುಂಡಾಜೆ : ಮನೆಯಲ್ಲಿಟ್ಟಿದ್ದ ರೂ.5 ಲಕ್ಷ ಬೆಲೆಬಾಳುವ 122ಗ್ರಾಂ ಚಿನ್ನಾಭರಣ ಕಳವು : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ , ಉಪಾಧ್ಯಕ್ಷರಾಗಿ ಶ್ರೀಮತಿ ಸುರೇಖಾ ಆಯ್ಕೆ

Suddi Udaya

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ನಡೆದ ಮತದಾರರ ಬೃಹತ್ ಸಮಾವೇಶದಲ್ಲಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾಗಿ

Suddi Udaya

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya
error: Content is protected !!