September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ14-15 ಎಸ್.ಡಿ.ಎಂ ಝೇಂಕಾರ ಉತ್ಸವ: ಖ್ಯಾತ ನಟ ರಮೇಶ್ ಅರವಿಂದ್ ವಿಶೇಷ ಆಕರ್ಷಣೆ

ಉಜಿರೆ: ಯುವ ಪ್ರತಿಭಾನ್ವಿತರ ಕಲಾತ್ಮಕ ಅಭಿವ್ಯಕ್ತಿಗೆ ವೇದಿಕೆ ಒದಗಿಸಿಕೊಡುವ ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದ ಪ್ರಸಕ್ತ ವರ್ಷದ ಝೇಂಕಾರದ ಐದನೇ ಆವೃತ್ತಿಯ ಸಾಂಸ್ಕೃತಿಕ ಉತ್ಸವ ಮಾ.14-15 ರಂದು ನಡೆಯಲಿದೆ. ಈ ಸಲದ ಪ್ರಮುಖ ಆಕರ್ಷಣೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಗಮನ ಸೆಳೆಯಲಿದ್ದಾರೆ.

ಪ್ರತಿವರ್ಷವೂ ಆಯೋಜಿತವಾಗುವ ಝೇಂಕಾರ ಸ್ಟಾರ್ ನೈಟ್‌ಗೆ ಖ್ಯಾತ ಜನಪ್ರಿಯ ನಟರು ಆಗಮಿಸುತ್ತಾರೆ. ಬೆಳೆಗಿನ ಅವಧಿಯಲ್ಲಿ ಉತ್ಸವಕ್ಕೆ ಚಾಲನೆ ನೀಡಿದ ನಂತರ ವಿವಿಧ ಸ್ಪರ್ಧೆಗಳು ಎರಡು ದಿನಗಳ ಕಾಲ ಆಯೋಜಿತವಾಗಲಿವೆ. ಆರಂಭದ ದಿನ ಸಂಜೆ ನಡೆಯುವ ಸ್ಟಾರ್‌ನೈಟ್ ಕಾರ್ಯಕ್ರಮವನ್ನು ರಮೇಶ್ ಅರವಿಂದ್ ನಡೆಸಿಕೊಡಲಿದ್ದಾರೆ.

ಮಾಕ್ ಪ್ರೆಸ್, ಪ್ರೊ ಪ್ರೆಸೆಂಟರ್, ಕಲರ್ ಫುಲ್ ಕ್ಯಾನವಾಸ್ ಶೀರ್ಷಿಕೆಯ ವೈಯುಕ್ತಿಕ ವಿಭಾಗದ ಸ್ಪರ್ಧೆಗಳು ನಡೆಯಲಿವೆ. ಗ್ರುಪ್ ಇವೆಂಟ್ ವಿಭಾಗದಲ್ಲಿ ಸಮೂಹ ನೃತ್ಯ, ಫ್ಯಾಷನ್ ಪರೇಡ್, ರಸಪ್ರಶ್ನೆ, ಔಟ್ ಡೋರ್ ಇವೆಂಟ್ ವಿಭಾಗದಲ್ಲಿ ಗಲ್ಲಿ ಕ್ರಿಕೆಟ್ ಪಂದ್ಯಾವಳಿ, ಸ್ಪಾಟ್ ಇವೆಂಟ್ ವಿಭಾಗದಲ್ಲಿ ರೀಲ್ ಮೇಕಿಂಗ್, ಸ್ಪಾಟ್ ಫೋಟೋಗ್ರಫಿ ಸ್ಪರ್ಧೆಗಳು ಏರ್ಪಡಲಿವೆ.

ರಾಜ್ಯದ ವಿವಿಧೆಡೆಗಳಿಂದ 40ಕ್ಕೂ ಹೆಚ್ಚು ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಎರಡು ದಿನಗಳ ಕಾಲ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಅಂಗಳ ವೈವಿಧ್ಯಮಯ ಸ್ಪರ್ಧೆಗಳಲ್ಲಿ ಭಾಗವಹಿಸುವ ಪ್ರತಿಭಾನ್ವಿತ ಯುವ ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣದ ವೇದಿಕೆಯಾಗಿ ಕಂಗೊಳಿಸಲಿದೆ. ವಿವಿಧ ವಿಭಾಗಗಳ ಸ್ಪರ್ಧೆಗಳಲ್ಲಿ ವಿಜೇತರಾಗುವ ವಿದ್ಯಾರ್ಥಿಗಳು ಒಂದು ಲಕ್ಷ ರೂ. ಮೌಲ್ಯದ ವಿವಿಧ ಬಹುಮಾನಗಳನ್ನು ಪಡೆಯಲಿದ್ದಾರೆ.

Related posts

ಚಾರ್ಮಾಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ

Suddi Udaya

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಳ್ಳಿ ಸಂತೆ

Suddi Udaya

ಫೆ.19: ಬೆಳ್ತಂಗಡಿಯಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಹೊಸ ಪರಿಕಲ್ಪನೆಯೊಂದಿಗೆ ಸಾಂಸ್ಕೃತಿಕ ವೈಭವ

Suddi Udaya

ಉಜಿರೆ: ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಮರ ಬಿದ್ದು ಹಾನಿ, ಅಪಾಯದಿಂದ ಪಾರಾದ ಮಕ್ಕಳು

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ

Suddi Udaya
error: Content is protected !!