24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

ಬೆಳ್ತಂಗಡಿ: ಕಳೆದ ಕೆಲವು ದಿನಗಳಿಂದ ತಾಲೂಕಿನ ವಿವಿಧೆಡೆ ಒಂಟಿ ಸಲಗ ತಿರುಗಾಡುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಕಾಡಾನೆಯ ಸಂಚಾರದಿಂದ ರೈತರ ಕೃಷಿ ಭೂಮಿ ಹಲವು ಕಡೆ ನಾಶವಾಗಿದೆ.

ಇಂದು ಬೆಳಿಗ್ಗೆ ಮೊಗ್ರು ಗ್ರಾಮದ ಕರಂಬಾರುವಿನಲ್ಲಿ ಕಾಡಾನೆಯು ಪ್ರತ್ಯಕ್ಷವಾಗಿದ್ದು, ಕರಂಬಾರು ಕೃಷ್ಣಪ್ಪ ಗೌಡರ ನೀರಿನ ಪಂಪುಗೆ ಹಾನಿಮಾಡಿದ್ದು, ಗ್ರಾಮಸ್ಥರು ಜಾಗರುಕತೆಯಿಂದ ಇರುವಂತೆ ತಿಳಿಸಿದ್ದಾರೆ.

ಕಾಡಾನೆಯು ಕೊಯ್ಯರು, ಕಣಿಯೂರು ದಾಟಿ ಮಲೆಂಗಲ್ಲು, ಪದ್ಮುಂಜ, ಪೊಯ್ಯ ಮೂಲಕ ಮೊಗ್ರು ಗ್ರಾಮದ ಬುಳೇರಿ ಸಮೀಪದ ಕರಂಬಾರು ಸುದೆಪಿಲ ಸಮೀಪದ ನೇತ್ರಾವತಿ ನದಿಯಲ್ಲಿ ಜಳಕ ಮಾಡಿ ಮುಂದೆ ಸಾಗಿದೆ ಎಂದು ಮಾಹಿತಿ ಲಭಿಸಿದೆ.

Related posts

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ: ಕಂದಾಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಭತ್ತದ ತಳಿ ಸಂರಕ್ಷಕ ದೇವರಾವ್ ಅವರಿಗೆ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ನೇಮಕ

Suddi Udaya

ಉಜಿರೆ: ಶ್ರೀ. ಧ.ಮಂ. ಆಂಗ್ಲಮಾಧ್ಯಮ ಶಾಲೆಯಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಫೆ.13: ವಿದ್ಯುತ್ ನಿಲುಗಡೆ

Suddi Udaya
error: Content is protected !!