23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

ಬೆಳ್ತಂಗಡಿ: ಕಳೆದ ಕೆಲವು ದಿನಗಳಿಂದ ತಾಲೂಕಿನ ವಿವಿಧೆಡೆ ಒಂಟಿ ಸಲಗ ತಿರುಗಾಡುತ್ತಿದ್ದು, ಜನರು ಭಯಭೀತರಾಗಿದ್ದಾರೆ. ಕಾಡಾನೆಯ ಸಂಚಾರದಿಂದ ರೈತರ ಕೃಷಿ ಭೂಮಿ ಹಲವು ಕಡೆ ನಾಶವಾಗಿದೆ.

ಇಂದು ಬೆಳಿಗ್ಗೆ ಮೊಗ್ರು ಗ್ರಾಮದ ಕರಂಬಾರುವಿನಲ್ಲಿ ಕಾಡಾನೆಯು ಪ್ರತ್ಯಕ್ಷವಾಗಿದ್ದು, ಕರಂಬಾರು ಕೃಷ್ಣಪ್ಪ ಗೌಡರ ನೀರಿನ ಪಂಪುಗೆ ಹಾನಿಮಾಡಿದ್ದು, ಗ್ರಾಮಸ್ಥರು ಜಾಗರುಕತೆಯಿಂದ ಇರುವಂತೆ ತಿಳಿಸಿದ್ದಾರೆ.

ಕಾಡಾನೆಯು ಕೊಯ್ಯರು, ಕಣಿಯೂರು ದಾಟಿ ಮಲೆಂಗಲ್ಲು, ಪದ್ಮುಂಜ, ಪೊಯ್ಯ ಮೂಲಕ ಮೊಗ್ರು ಗ್ರಾಮದ ಬುಳೇರಿ ಸಮೀಪದ ಕರಂಬಾರು ಸುದೆಪಿಲ ಸಮೀಪದ ನೇತ್ರಾವತಿ ನದಿಯಲ್ಲಿ ಜಳಕ ಮಾಡಿ ಮುಂದೆ ಸಾಗಿದೆ ಎಂದು ಮಾಹಿತಿ ಲಭಿಸಿದೆ.

Related posts

ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲಾದ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya

ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿಯ ಧರ್ಮದರ್ಶಿ ಹರೀಶ್ ದಂಪತಿಗಳಿಂದ ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಗೊಗ್ರಾಸಕ್ಕಾಗಿ ರೂ.25,000 ದೇಣಿಗೆ ಹಸ್ತಾಂತರ

Suddi Udaya

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya
error: Content is protected !!