25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮತ್ತು ವಾರ್ಷಿಕ ಜಾತ್ರೋತ್ಸವ

ತಣ್ಣೀರುಪಂತ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಮಾ.13 ರಂದು ನಡೆಯಿತು.
ಬೆಳಿಗ್ಗೆ ಪ್ರಾರ್ಥನೆ, ಗಣಪತಿ ಹೋಮ, ಕಲಶಪೂಜೆ, ಊರವರಿಂದ ಹೊರ ಕಾಣಿಕೆ, ಊರವರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಉಡುಪಿ ಶ್ರೀರಾಮ ತೀರ್ಥ ಮಠ ಕಾಣಿಯೂರು ಮೂಲ ಮಹಾಸಂಸ್ಥಾನಮ್ ನ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಜಗದ್ಗುರು ಶ್ರೀಮನ್ಮಧ್ವಾಚಾರ್ಯ ರವರಿಗೆ ವ್ಯವಸ್ಥಾಪನ ಸಮಿತಿ ಸದಸ್ಯರು ಅಭಿವೃದ್ಧಿ ಸಮಿತಿ ಸದಸ್ಯರು, ವರಮಹಾಲಕ್ಷ್ಮಿ ಸಮಿತಿಯ ಸದಸ್ಯರಿಂದ ಪೂರ್ಣಕುಂಭ ಸ್ವಾಗತ ಮಾಡಲಾಯಿತು.

ನಂತರ ಸ್ವಾಮೀಜಿಯಿಂದ ಆಶೀರ್ವಚನ ನೀಡಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಭರತ್ ಶೆಟ್ಟಿ, ಅರ್ಚಕರದ ಅಶೋಕ್ ಭಟ್, ಸಮಿತಿಯ ಸದಸ್ಯರಾದ ಪೂವಪ್ಪ ಬಂಗೇರ, ದುಗ್ಗಪ್ಪಗೌಡ, ದೇಜಪ್ಪ ಪೂಜಾರಿ ಮಹೇಶ್, ಜಯಪ್ರಕಾಶ್, ಪೂವಪ್ಪ ಗೌಡ, ಆನಂದ ಮಡಿವಾಳ ಉಪಸ್ಥಿತರಿದ್ದರು.

ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಪ್ರಭಾಕರ್ ಗೌಡ ಪೋಸoದೊಡಿ. ಸ್ವಾಗತಿಸಿ, ದೇವದಾಸ್ ಕಾರ್ಯಕ್ರಮವನ್ನು ನಿರೂಪಿಸಿದರು. ನಂತರ , ಶ್ರೀ ದೇವರುಗಳಿಗೆ ಕಲಶಾಭಿಷೇಕ, ನಾಗದೇವರಿಗೆ ಆಶ್ಲೇಷಾ ಬಲಿ, ತಂಬಿಲ, ದೈವಗಳಿಗೆ ತಂಬಿಲ ಸೇವೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ರಾತ್ರಿ ದುರ್ಗಾಪೂಜೆ, ರಂಗಪೂಜೆ, ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ ನಡೆಯಲಿದೆ.


ಮಾರ್ಚ್ ೧೪ರಂದು ಬೆಳಿಗ್ಗೆ ಗಣಪತಿ ಹೋಮ, ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ ಹಾಗೂ ಬಟ್ಟಲು ಕಾಣಿಕೆ, ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಪಲ್ಲಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ನೇಮೋತ್ಸವ ಜರುಗಲಿದೆ.

Related posts

ಮೇಲಂತಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಪಿಕಪ್ ಗೂಡ್ಸ್ ಟೆಂಪೋ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಐಸಿವೈಎಮ್ ಘಟಕದ ಕ್ರಿಸ್ಮಸ್ ಟ್ಯಾಬ್ಲೊ

Suddi Udaya

ಮಾ.21-24: ಶಿಶಿಲ ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ವೇಣೂರು: ಉಳ್ತೂರು ನೂರುಲ್ ಹುದಾ ದರ್ಸ್ ವಿದ್ಯಾರ್ಥಿ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಏರುತ್ತಿರುವ ತಾಪಮಾನ: ಅಂಗನವಾಡಿ ಕೇಂದ್ರಗಳ ಸಮಯ ಪರಿಷ್ಕರಣೆ- ಬೆಳಗ್ಗೆ 8ರಿಂದ ಮಧ್ಯಾಹ್ನ 12 ರವರೆಗೆ ಕಾರ್ಯ ನಿರ್ವಹಣೆಗೆ ಆದೇಶ

Suddi Udaya

ಆ 17: ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಲಾಕ್ಮಿ ಕಂಪೆನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya
error: Content is protected !!