March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡ ಕೊರಗಪ್ಪ ಟಿ.ರವರಿಗೆ ಬೀಳ್ಕೊಡುಗೆ ಸಮಾರಂಭ

ಬಂದಾರು: ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಇಲ್ಲಿ ಸುಮಾರು 23 ವರ್ಷ ಗಣಿತ ಶಿಕ್ಷಕರಾಗಿ, ಕೆಲವು ಸಮಯ ಪ್ರಭಾರ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಕೊರಗಪ್ಪ ಇವರು ಪದೋನ್ನತಿಗೊಂಡು ಸರ್ಕಾರಿ ಪ್ರೌಢ ಶಾಲೆ ಹಳೇಪೇಟೆ ಉಜಿರೆಗೆ ವರ್ಗಾವಣೆಗೊಂಡಿರುವ ಪ್ರಯುಕ್ತ ಅವರಿಗೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಮತ್ತು ಊರವರ ವತಿಯಿಂದ ಬೀಳ್ಕೊಡುಗೆ ಸಮಾರಂಭವು ಮಾ, 9 ರಂದು ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಮಹಾಬಲ ಗೌಡ ವಹಿಸಿದ್ದು, ಕೊರಗಪ್ಪರು ಗಣಿತ ವಿಷಯವನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಬೋಧಿಸಿ, ಮಕ್ಕಳಿಗೆ ಅಚ್ಚು ಮೆಚ್ಚಿನ ಶಿಕ್ಷಕರಾಗಿದ್ದರು ಎಂದು ಹೇಳಿದರು. ಶಾಲಾ ಸ್ಥಾಪನೆಗೆ ಕಾರಣ ಕರ್ತರಾದ ಕೊಂಕನೊಟ್ಟು ದೇಜಪ್ಪ ಗೌಡ , ಹಿರಿಯರಾದ ಹೊನ್ನಪ್ಪ ಗೌಡ, ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ಅನಿತಾ , ಕಂಚರೊಟ್ಟು ಡೀಕಯ್ಯ ಗೌಡ, ಎಸ್.ಡಿ.ಎಂ.ಸಿ.ಯ ಸದಸ್ಯರು ಉಪಸ್ಥಿತರಿದ್ದರು. ಶೇಖರ್ ಎನ್., ಮಹೇಶ್ ನಿಲಜಿ , ವಿವೇಕಾನಂದ ಗೌಡ, ಮಹೇಶ್ ಎ. ಕೊರಗಪ್ಪರ ಸೇವೆಯನ್ನು ಸ್ಮರಿಸಿ ಅಭಿನಂದನೆ ಸಲ್ಲಿಸಿದರು.

ಹಳೆವಿದ್ಯಾರ್ಥಿಗಳಾದ ಸುರಕ್ಷಿತ, ನವೀನ್ ಪ್ರಕಾಶ್ , ವಿದ್ಯಾರ್ಥಿಗಳಾದ, ಶ್ರದ್ಧಾ, ಪಲ್ಲವಿ, ವನ್ಯಶ್ರೀ, ದಿವ್ಯಾ ಗುರುಗಳ ಗುಣಗಾನ ಮಾಡಿದರು. ಕನ್ನಡ ಶಿಕ್ಷಕಿ ಹೇಮಲತಾ ಅಭಿನಂದನಾ ಪತ್ರ ವಾಚಿಸಿದರು. ಕೊರಗಪ್ಪ , ಮತ್ತು ಅವರ ಪತ್ನಿ ಶ್ರೀಮತಿ ತ್ರಿವೇಣಿಯವರನ್ನು ಅಭಿನಂದಿಸಲಾಯಿತು.

ವಿದ್ಯಾರ್ಥಿನಿಯರಾದ ಗಣ್ಯಶ್ರೀ, ರಶ್ಮಿತಾ, ಯಶಸ್ವಿಯವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ಬಾಲಕೃಷ್ಣ ಕೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಅತಿಥಿ ಶಿಕ್ಷಕಿ ದೀಕ್ಷಾ ವಂದಿಸಿದರು. ವಿಜಯ ಕುಮಾರ್ ಎಂ ಕೊಯ್ಯೂರು, ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ನವೋದಯ ಪ್ರೌಢಶಾಲೆ ಮತ್ತು ಲಾಯಿಲ ಬಿ.ಇಡಿ ಕಾಲೇಜಿನ ನಿವೃತ್ತ ಗೌರವ ಪ್ರಾಧ್ಯಾಪಕ ಪಿ ವೆಂಕಟರಮಣ ನಿಧನ

Suddi Udaya

ನಾರಾಯಣ ಅಭ್ಯಂಕರ್ ನಿಧನ

Suddi Udaya

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

Suddi Udaya

ಕೊಕ್ಕಡ: ನಿವೃತ್ತ ಅಧ್ಯಾಪಕ ಕುಂ‌‌ಞಪ್ಪ ಗೌಡ ದಂಪತಿ ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ: ಸಂಘ ಸಂಸ್ಥೆಗಳಿಗೆ ಧನಸಹಾಯ

Suddi Udaya
error: Content is protected !!