22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

ಬೆಳ್ತಂಗಡಿ: ಅಂಬ್ಯೂಲೆನ್ಸ್‌ ವಾಹನವು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಚಲಾಯಿಸಿಕೊಂಡು ಹೋಗುವಾಗ ವಿರುದ್ದ ದಿಕ್ಕಿನಿಂದ ಬಂದ ಕಾರನ್ನು ಆದರ ಚಾಲಕನು ಅಂಬ್ಯೂಲೆನ್ಸ್‌ ವಾಹನಕ್ಕೆ ಅಡ್ಡ ನಿಲ್ಲಿಸಿ, ಕಾರಿನ ಚಾಲಕ ಮತ್ತು ಓರ್ವ ಮಹಿಳೆ ಕಾರಿನಿಂದ ಇಳಿದು ಅಂಬ್ಯೂಲೆನ್ಸ್ ಚಾಲಕನಿಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು, ವಾಹನಕ್ಕೆ ಹಾನಿ ಮಾಡಿದ ಘಟನೆ ಮಾ.12ರಂದು ನಡೆದಿದೆ.

ಕಡಬ ವಿದ್ಯಾ ನಗರ ಸುಬ್ರಮಣ್ಯ ಗ್ರಾಮದ ನಿವಾಸಿ ರಕ್ಷಿತ್‌ ಕುಮಾರ್‌, (27) ಎಂಬವರ ದೂರಿನಂತೆ, ಮಾ.12 ರಂದು ಮಧ್ಯಾಹ್ನ ಸಮಯ, ಬೆಳ್ತಂಗಡಿ ತಾಲೂಕು ಲಾಯಿಲಾ ಗ್ರಾಮದ ಲಾಯಿಲಾ ಜಂಕ್ಷನ್‌ ಎಂಬಲ್ಲಿ, ಅಂಬ್ಯುಲೆನ್ಸ್ ಚಾಲಕ ರಕ್ಷಿತ್ ರವರು ತಮ್ಮ ಬಾಬ್ತು ಕೆಎ-06-ಜಿ-1259 ನೇ ನಂಬ್ರದ ಅಂಬ್ಯೂಲೆನ್ಸ್‌ ವಾಹನವನ್ನು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಚಲಾಯಿಸಿಕೊಂಡು ಹೋಗುವಾಗ ವಿರುದ್ದ ದಿಕ್ಕಿನಿಂದ ಬಂದ ಕೆಎ-51- ಎಂಡಿ -4631 ನೇ ಕಾರನ್ನು ಆದರ ಚಾಲಕನು ರಕ್ಷಿತ್ ಚಲಾಯಿಸುತ್ತಿದ್ದ ಅಂಬ್ಯೂಲೆನ್ಸ್‌ ವಾಹನಕ್ಕೆ ಅಡ್ಡ ನಿಲ್ಲಿಸಿ, ಕಾರಿನ ಚಾಲಕ ಮತ್ತು ಓರ್ವ ಮಹಿಳೆ ಕಾರಿನಿಂದ ಇಳಿದು ಬಂದು ರಕ್ಷಿತ್ಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು, ವಾಹನಕ್ಕೆ ಹಾನಿ ಮಾಡಿ ಸುಮಾರು 3000/-ರೂ ಗಳಷ್ಟು ನಷ್ಟ ಉಂಟಾಗಿದೆ ಎಂದು ಆರೋಪಿಸಿದ್ದಾರೆ.

ಹಲ್ಲೆಯಿಂದ ಗಾಯಗೊಂಡ ರಕ್ಷಿತ್ ರವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ 33/2024 ಕಲಂ:504,341,323, 427, ಜೊತೆಗೆ 34 ಭಾ ದಂ ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಶಿಬಾಜೆ : ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

Suddi Udaya

ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 101 ಎಳನೀರು ಅಭಿಷೇಕ, ನವಕ ಕಲಶ ಅಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

Suddi Udaya

ಕೊಕ್ಕಡ ಅಡೈ ಶಿವಶಕ್ತಿ ಭಜನಾ ಮಂದಿರದ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾ ರವರಿಂದ ರೂ.50 ಸಾವಿರ ಸಹಾಯಧನ ವಿತರಣೆ

Suddi Udaya

ಧರ್ಮಸ್ಥಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya
error: Content is protected !!