22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

ಬೆಳ್ತಂಗಡಿ: ಅಂಬ್ಯೂಲೆನ್ಸ್‌ ವಾಹನವು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಚಲಾಯಿಸಿಕೊಂಡು ಹೋಗುವಾಗ ವಿರುದ್ದ ದಿಕ್ಕಿನಿಂದ ಬಂದ ಕಾರನ್ನು ಆದರ ಚಾಲಕನು ಅಂಬ್ಯೂಲೆನ್ಸ್‌ ವಾಹನಕ್ಕೆ ಅಡ್ಡ ನಿಲ್ಲಿಸಿ, ಕಾರಿನ ಚಾಲಕ ಮತ್ತು ಓರ್ವ ಮಹಿಳೆ ಕಾರಿನಿಂದ ಇಳಿದು ಅಂಬ್ಯೂಲೆನ್ಸ್ ಚಾಲಕನಿಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು, ವಾಹನಕ್ಕೆ ಹಾನಿ ಮಾಡಿದ ಘಟನೆ ಮಾ.12ರಂದು ನಡೆದಿದೆ.

ಕಡಬ ವಿದ್ಯಾ ನಗರ ಸುಬ್ರಮಣ್ಯ ಗ್ರಾಮದ ನಿವಾಸಿ ರಕ್ಷಿತ್‌ ಕುಮಾರ್‌, (27) ಎಂಬವರ ದೂರಿನಂತೆ, ಮಾ.12 ರಂದು ಮಧ್ಯಾಹ್ನ ಸಮಯ, ಬೆಳ್ತಂಗಡಿ ತಾಲೂಕು ಲಾಯಿಲಾ ಗ್ರಾಮದ ಲಾಯಿಲಾ ಜಂಕ್ಷನ್‌ ಎಂಬಲ್ಲಿ, ಅಂಬ್ಯುಲೆನ್ಸ್ ಚಾಲಕ ರಕ್ಷಿತ್ ರವರು ತಮ್ಮ ಬಾಬ್ತು ಕೆಎ-06-ಜಿ-1259 ನೇ ನಂಬ್ರದ ಅಂಬ್ಯೂಲೆನ್ಸ್‌ ವಾಹನವನ್ನು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಚಲಾಯಿಸಿಕೊಂಡು ಹೋಗುವಾಗ ವಿರುದ್ದ ದಿಕ್ಕಿನಿಂದ ಬಂದ ಕೆಎ-51- ಎಂಡಿ -4631 ನೇ ಕಾರನ್ನು ಆದರ ಚಾಲಕನು ರಕ್ಷಿತ್ ಚಲಾಯಿಸುತ್ತಿದ್ದ ಅಂಬ್ಯೂಲೆನ್ಸ್‌ ವಾಹನಕ್ಕೆ ಅಡ್ಡ ನಿಲ್ಲಿಸಿ, ಕಾರಿನ ಚಾಲಕ ಮತ್ತು ಓರ್ವ ಮಹಿಳೆ ಕಾರಿನಿಂದ ಇಳಿದು ಬಂದು ರಕ್ಷಿತ್ಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು, ವಾಹನಕ್ಕೆ ಹಾನಿ ಮಾಡಿ ಸುಮಾರು 3000/-ರೂ ಗಳಷ್ಟು ನಷ್ಟ ಉಂಟಾಗಿದೆ ಎಂದು ಆರೋಪಿಸಿದ್ದಾರೆ.

ಹಲ್ಲೆಯಿಂದ ಗಾಯಗೊಂಡ ರಕ್ಷಿತ್ ರವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ 33/2024 ಕಲಂ:504,341,323, 427, ಜೊತೆಗೆ 34 ಭಾ ದಂ ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಮೋಹನ್ ಗೌಡ, ಉಪಾಧ್ಯಕ್ಷರಾಗಿ ಶ್ರೀಮತಿ ಲತಾ ಶೆಟ್ಟಿ ಆಯ್ಕೆ

Suddi Udaya

ಬಟ್ಟೆಗಳ ಬೃಹತ್ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ ಶೇ.10 ಡಿಸ್ಕೌಂಟ್ ಸೇಲ್

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ಕಂಬಳ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅನುಮತಿ

Suddi Udaya

ನಿಡ್ಲೆ: ಕಜೆ ನಿವಾಸಿ ಸರಸ್ವತಿ ನಿಧನ

Suddi Udaya
error: Content is protected !!