September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

ಬೆಳ್ತಂಗಡಿ: ಅಂಬ್ಯೂಲೆನ್ಸ್‌ ವಾಹನವು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಚಲಾಯಿಸಿಕೊಂಡು ಹೋಗುವಾಗ ವಿರುದ್ದ ದಿಕ್ಕಿನಿಂದ ಬಂದ ಕಾರನ್ನು ಆದರ ಚಾಲಕನು ಅಂಬ್ಯೂಲೆನ್ಸ್‌ ವಾಹನಕ್ಕೆ ಅಡ್ಡ ನಿಲ್ಲಿಸಿ, ಕಾರಿನ ಚಾಲಕ ಮತ್ತು ಓರ್ವ ಮಹಿಳೆ ಕಾರಿನಿಂದ ಇಳಿದು ಅಂಬ್ಯೂಲೆನ್ಸ್ ಚಾಲಕನಿಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು, ವಾಹನಕ್ಕೆ ಹಾನಿ ಮಾಡಿದ ಘಟನೆ ಮಾ.12ರಂದು ನಡೆದಿದೆ.

ಕಡಬ ವಿದ್ಯಾ ನಗರ ಸುಬ್ರಮಣ್ಯ ಗ್ರಾಮದ ನಿವಾಸಿ ರಕ್ಷಿತ್‌ ಕುಮಾರ್‌, (27) ಎಂಬವರ ದೂರಿನಂತೆ, ಮಾ.12 ರಂದು ಮಧ್ಯಾಹ್ನ ಸಮಯ, ಬೆಳ್ತಂಗಡಿ ತಾಲೂಕು ಲಾಯಿಲಾ ಗ್ರಾಮದ ಲಾಯಿಲಾ ಜಂಕ್ಷನ್‌ ಎಂಬಲ್ಲಿ, ಅಂಬ್ಯುಲೆನ್ಸ್ ಚಾಲಕ ರಕ್ಷಿತ್ ರವರು ತಮ್ಮ ಬಾಬ್ತು ಕೆಎ-06-ಜಿ-1259 ನೇ ನಂಬ್ರದ ಅಂಬ್ಯೂಲೆನ್ಸ್‌ ವಾಹನವನ್ನು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಚಲಾಯಿಸಿಕೊಂಡು ಹೋಗುವಾಗ ವಿರುದ್ದ ದಿಕ್ಕಿನಿಂದ ಬಂದ ಕೆಎ-51- ಎಂಡಿ -4631 ನೇ ಕಾರನ್ನು ಆದರ ಚಾಲಕನು ರಕ್ಷಿತ್ ಚಲಾಯಿಸುತ್ತಿದ್ದ ಅಂಬ್ಯೂಲೆನ್ಸ್‌ ವಾಹನಕ್ಕೆ ಅಡ್ಡ ನಿಲ್ಲಿಸಿ, ಕಾರಿನ ಚಾಲಕ ಮತ್ತು ಓರ್ವ ಮಹಿಳೆ ಕಾರಿನಿಂದ ಇಳಿದು ಬಂದು ರಕ್ಷಿತ್ಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು, ವಾಹನಕ್ಕೆ ಹಾನಿ ಮಾಡಿ ಸುಮಾರು 3000/-ರೂ ಗಳಷ್ಟು ನಷ್ಟ ಉಂಟಾಗಿದೆ ಎಂದು ಆರೋಪಿಸಿದ್ದಾರೆ.

ಹಲ್ಲೆಯಿಂದ ಗಾಯಗೊಂಡ ರಕ್ಷಿತ್ ರವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ 33/2024 ಕಲಂ:504,341,323, 427, ಜೊತೆಗೆ 34 ಭಾ ದಂ ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು: ಅರಣ್ಯ ಸಂಚಾರಿ ದಳದಿಂದ ದಾಳಿ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ಕ್ಯೂ ಕಾಂಪ್ಲೆಕ್ಸ್ ಶ್ರೀ ಸಾನಿಧ್ಯದ ಸೇವೆಗೆ ವರ್ಷದ ಸಂಭ್ರಮ

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!