July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

ಬೆಳ್ತಂಗಡಿ: ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ ಕಾರ್ಯಕ್ರಮವನ್ನು ಮಾ.12 ರಂದು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೋ ಪದ್ಮನಾಭ ಕೆ, ಮುಖ್ಯಸ್ಥರು ವಾಣಿಜ್ಯ ವಿಭಾಗ ವಹಿಸಿದ್ದರು. ಇವರು ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳು ವೃತ್ತಿ ಕೌಶಲ್ಯ ತರಬೇತಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ದಿವ್ಯ. ಎ ಆಗಮಿಸಿದ್ದರು. ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆ ನಡೆಸಿದರು.

ಈ ಕಾರ್ಯಕ್ರಮದಲ್ಲಿ ಪ್ರೊ ಸುರೇಶ್ ವಿ, ಸಂಚಾಲಕರು ವಿದ್ಯಾರ್ಥಿ ಪ್ರತಿಭಾ ವೇದಿಕೆ, ಡಾ.ರವಿ ಎಂ. ಎನ್. ಸಂಚಾಲಕರು ಸ್ನಾತಕೋತ್ತರ ವಿಭಾಗ, ಪ್ರೊ ನವೀನ್ ಹಾಗೂ ಪ್ರೊ ರಾಜೇಶ್ವರಿ ವಾಣಿಜ್ಯ ಶಾಸ್ತ್ರ ವಿಭಾಗ, ಪ್ರೊ ರಶ್ಮಿ, ನಿರ್ವಹಣಾ ವಿಭಾಗ ಹಾಗೂ ಪ್ರೊ ಕವಿತಾ, ಇತಿಹಾಸ ವಿಭಾಗ ಹಾಗೂ ಇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ತೃತೀಯ ಬಿಕಾಂನ ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು. ವಿನುತ ಹಾಗೂ ತಂಡದವರು ಪ್ರಾರ್ಥಿಸಿ, ಅಂಕಿತ ಸ್ವಾಗತಿಸಿ, ವನಿತಾ ಧನ್ಯವಾದವಿತ್ತರು.

Related posts

ಮದ್ದಡ್ಕ ವಿಶ್ವ ಹಿಂದೂ ಪರಿಷತ್ ಭಜರಂಗದಳ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಗುಂಡೂರಿ ದ.ಕ.ಜಿ.ಪಂ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಕಿಟ್ ವಿತರಣೆ

Suddi Udaya

ಸಂತ ತೆರೇಸಾ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಿಎ ಫೌಂಡೇಶನ್ ಹಾಗೂ ಸಿಪಿಟಿ ವಿಷಯದ ಕುರಿತು ಪುನಶ್ಚೇತನ ಕಾರ್ಯಾಗಾರ

Suddi Udaya

ಗುರುವಾಯನಕೆರೆ: ವೈಭವ್ ಹಾರ್ಡ್‌ವೇರ್ ಮಾಲೀಕ ಸೀತರಾಮ ಶೆಟ್ಟಿಯವರ ಮಾತೃಶ್ರೀ ಸೋಮಕ್ಕ (ಲೀಲಾ ಶೆಟ್ಟಿ) ವಿಧಿವಶ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ನೂತನ ರಾಜ್ಯ ಪ್ರತಿನಿಧಿಯಾಗಿ ಭಾರತಿ ಪರ್ಕಳ ಆಯ್ಕೆ

Suddi Udaya
error: Content is protected !!