September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಸಿಎಎ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

ಬೆಳ್ತಂಗಡಿ : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್‌ಡಿಪಿಐ ಪಕ್ಷ ಮಾ.12ರಂದು ರಾತ್ರಿ ಪ್ರತಿಭಟನೆ ನಡೆಸಿದೆ.


ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ನವಾಝ್ ಕಟ್ಟೆ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆ (2019) ಜಾರಿಗೆ ಬರಲಿದೆ ಎಂದು ಕೇಂದ್ರ ಬಿಜೆಪಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಕ್ರಮವನ್ನು ಎಸ್ ಡಿಪಿಐ ತೀವ್ರವಾಗಿ ಖಂಡಿಸುತ್ತದೆ. ಜನರು ಈ ಕಾನೂನನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದರು.
ಚುನಾವಣಾ ಸೋಲಿನ ಭಯ ಮತ್ತು ಸುಪ್ರೀಂ ಕೋರ್ಟ್ ಬಹಿರಂಗಪಡಿಸಿದ ಚುನಾವಣಾ ಬಾಂಡ್ ಗಳಲ್ಲಿನ ಅಕ್ರಮಗಳಿಂದಾಗಿ ಜನರನ್ನು ವಿಭಜಿಸಲು ಮತ್ತು ದೇಶದಲ್ಲಿ ಅಶಾಂತಿಯ ವಾತಾವರಣವನ್ನು ಸೃಷ್ಟಿಸಲು ಚುನಾವಣಾ ಘೋಷಣೆ ಮಾಡುತ್ತಿರುವ ಸಮಯದಲ್ಲಿ ಬಿಜೆಪಿ ಸರ್ಕಾರ ಈ ಘೋಷಣೆ ಮಾಡಿದೆ ಎಂದು ಆರೋಪಿಸಿದರು.


ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುಂಜಾಲಕಟ್ಟೆ, ಬಂಗೇರಕಟ್ಟೆ, ಪಣಕಜೆ, ಕಡವಿನ ಬಾಗಿಲು, ಕುದ್ರಡ್ಕ, ಅಂಡೆತಡ್ಕ, ಬಾಜಾರು, ಪೆರಲ್ದರ ಕಟ್ಟೆ, ಲಾಯಿಲ, ಬೆಳ್ತಂಗಡಿ ನಗರ ವ್ಯಾಪ್ತಿಯ ಸಂಜಯನಗರ ಕಡೆಗಳಲ್ಲಿ ಮಂಗಳವಾರ ರಾತ್ರಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಬಿತ್ತಿಪತ್ರ ಪ್ರದರ್ಶನ ಹಾಗೂ CAA ವಿರುದ್ಧ ಘೋಷಣೆ ಕೂಗುವ ಮೂಲಕ ಎಸ್‌ಡಿಪಿಐ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ನಾಗರೀಕರು ಬೀದಿಗೆ ಬಂದು ಪ್ರತಿಭಟನೆ ನಡೆಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನ ಎನ್. ಎಸ್. ಎಸ್. ವಿದ್ಯಾರ್ಥಿ ತೇಜಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ: ಯೋಜನೆಗಳ ಅನುಷ್ಠಾನದ ಬಗ್ಗೆ ರಾಜ್ಯದ ಜನತೆ ಭ್ರಮನಿರಸ: ಪತ್ರಿಕಾ ಹೇಳಿಕೆಯಲ್ಲಿ ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ತುಳು ಸಿಂಗಾರ ಚೆನ್ನೆಮಣೆ ಸ್ಪರ್ಧೆ

Suddi Udaya

ಜೂ.21: ಮೈಸೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!