23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

ಕಾಶಿಪಟ್ಣ : ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.13ರಿಂದ ಪ್ರಾರಂಭಗೊಂಡು 17ರ ತನಕ ನಡೆಯಲಿದೆ ಎಂದು ಪ್ರಧಾನ ಅರ್ಚಕರಾದ ಕೆ ಅನಂತ ಅಸ್ರಣ್ಣನವರು ತಿಳಿಸಿದ್ದಾರೆ.

ಮಾ.13 ಸಂಜೆ 7ರಿಂದ ಭಜನಾ ಕಾರ್ಯಕ್ರಮ (ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಕೇಳದಪೇಟೆ ಇವರಿಂದ ) ರಾತ್ರಿ 8 ರಿಂದ ಶ್ರೀ ಪಂಚಲಿಂಗೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ, ಕೇಳದಪೇಟೆ ಇವರಿಂದ ಯಕ್ಷಗಾನ ಬಯಲಾಟ “ದಕ್ಷಯಜ್ಞ ” ನಡೆಯಲಿದೆ.
ಮಾ.14ರಂದು ಬೆಳಿಗ್ಗೆ 8ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ, ಬೆಳಿಗ್ಗೆ ಗಂಟೆ 7.00ರಿಂದ ಭಜನಾ ಕಾರ್ಯಕ್ರಮ ಶ್ರೀ ಮಹಮ್ಮಾಯಿ ಭಜನಾ ಮಂಡಳಿ ಬಡಕೋಡಿ ಇವರಿಂದ, ಸಾಯಂಕಾಲ 8ರಿಂದ ವಿಜಯ್ ಕುಮಾರ್ ಜೈನ್ ಸಾರಥ್ಯದಲ್ಲಿ ಹಾಗೂ ತಂಡದವರಿಂದ ಗಾನ-ನೃತ್ಯ ವೈಭವ ನಡೆಯಲಿದೆ.
ಮಾ.15 ರಂದು ಸಂಜೆ 7ರಿಂದ ಭಜನಾ ಕಾರ್ಯಕ್ರಮ ಶ್ರೀ ಮಣಿಕಂಠ ಬಾಲ ಭಜನಾ ಮಂಡಳಿ ಪೆರಾಡಿ ಇವರಿಂದ ಸಂಜೆ ಗಂಟೆ 6ರಿಂದ ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇದರಿಂದ ಯಕ್ಷಗಾನ ಬಯಲಾಟ ನೂತನ ಪ್ರಸಂಗ ನಡೆಯಲಿದೆ.
ಮಾ.16 ಸಂಜೆ 7ರಿಂದ ಭಜನಾ ಕಾರ್ಯಕ್ರಮ ಶ್ರೀ ಕೃಷ್ಣ ಭಜನಾ ಮಂಡಳಿ ಸಾವ್ಯ ಇವರಿಂದ, ರಾತ್ರಿ ಗಂಟೆ 8.00ರಿಂದ ಪಿಂಗಾರ ಕಲಾವಿದರ್ ಬೆದ್ರ ಇವರಿಂದ ತುಳುನಾಟಕ ಕದಂಬ ನಡೆಯಲಿದೆ.
ಮಾ.17 ಸಂಜೆ 7ರಿಂದ ಭಜನ ಕಾರ್ಯಕ್ರಮ ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಕಾಶಿಪಟ್ಟ ಇವರಿಂದ ನಡೆಯಲಿದೆ.

Related posts

ಕಾಕ೯ಳ ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ 5ನೇ ಹೊಸ್ಮಾರಿನ ಶಾಖೆ ಉದ್ಘಾಟನೆ

Suddi Udaya

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

Suddi Udaya

ನಿಡ್ಲೆ ಪ್ರಾ. ಕೃ.ಪ. ಸ. ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ಲೋಕಾರ್ಪಣೆ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್, ಸೀರೆಗಳಿಗೆ ಕೇವಲ ರೂ 99

Suddi Udaya
error: Content is protected !!