23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

ಕಾಶಿಪಟ್ಣ : ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.13ರಿಂದ ಪ್ರಾರಂಭಗೊಂಡು 17ರ ತನಕ ನಡೆಯಲಿದೆ ಎಂದು ಪ್ರಧಾನ ಅರ್ಚಕರಾದ ಕೆ ಅನಂತ ಅಸ್ರಣ್ಣನವರು ತಿಳಿಸಿದ್ದಾರೆ.

ಮಾ.13 ಸಂಜೆ 7ರಿಂದ ಭಜನಾ ಕಾರ್ಯಕ್ರಮ (ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಕೇಳದಪೇಟೆ ಇವರಿಂದ ) ರಾತ್ರಿ 8 ರಿಂದ ಶ್ರೀ ಪಂಚಲಿಂಗೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ, ಕೇಳದಪೇಟೆ ಇವರಿಂದ ಯಕ್ಷಗಾನ ಬಯಲಾಟ “ದಕ್ಷಯಜ್ಞ ” ನಡೆಯಲಿದೆ.
ಮಾ.14ರಂದು ಬೆಳಿಗ್ಗೆ 8ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ, ಬೆಳಿಗ್ಗೆ ಗಂಟೆ 7.00ರಿಂದ ಭಜನಾ ಕಾರ್ಯಕ್ರಮ ಶ್ರೀ ಮಹಮ್ಮಾಯಿ ಭಜನಾ ಮಂಡಳಿ ಬಡಕೋಡಿ ಇವರಿಂದ, ಸಾಯಂಕಾಲ 8ರಿಂದ ವಿಜಯ್ ಕುಮಾರ್ ಜೈನ್ ಸಾರಥ್ಯದಲ್ಲಿ ಹಾಗೂ ತಂಡದವರಿಂದ ಗಾನ-ನೃತ್ಯ ವೈಭವ ನಡೆಯಲಿದೆ.
ಮಾ.15 ರಂದು ಸಂಜೆ 7ರಿಂದ ಭಜನಾ ಕಾರ್ಯಕ್ರಮ ಶ್ರೀ ಮಣಿಕಂಠ ಬಾಲ ಭಜನಾ ಮಂಡಳಿ ಪೆರಾಡಿ ಇವರಿಂದ ಸಂಜೆ ಗಂಟೆ 6ರಿಂದ ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇದರಿಂದ ಯಕ್ಷಗಾನ ಬಯಲಾಟ ನೂತನ ಪ್ರಸಂಗ ನಡೆಯಲಿದೆ.
ಮಾ.16 ಸಂಜೆ 7ರಿಂದ ಭಜನಾ ಕಾರ್ಯಕ್ರಮ ಶ್ರೀ ಕೃಷ್ಣ ಭಜನಾ ಮಂಡಳಿ ಸಾವ್ಯ ಇವರಿಂದ, ರಾತ್ರಿ ಗಂಟೆ 8.00ರಿಂದ ಪಿಂಗಾರ ಕಲಾವಿದರ್ ಬೆದ್ರ ಇವರಿಂದ ತುಳುನಾಟಕ ಕದಂಬ ನಡೆಯಲಿದೆ.
ಮಾ.17 ಸಂಜೆ 7ರಿಂದ ಭಜನ ಕಾರ್ಯಕ್ರಮ ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ಕಾಶಿಪಟ್ಟ ಇವರಿಂದ ನಡೆಯಲಿದೆ.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಏಪ್ರಿಲ್ 29: ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಶಿಶಿಲ-ಯುವ ಸಮಿತಿ, ಮಹಿಳಾ ಸಮಿತಿಯಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಮೂಡುಬಿದಿರೆ: ವೈಬ್ರೆಂಟ್ ವಿದ್ಯಾರ್ಥಿಗಳಿಗೆ ವಿಜೃಂಭಣೆಯ ಲಾಂಗ್ ಟರ್ಮ್ ಡೇ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!