26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಮಾ.18-23: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

ಬೆಳ್ತಂಗಡಿ: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಮಾ.18 ರಿಂದ ಮಾ.23ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ ಎಂದು ಅನುವಂಶಿಕ ಆಡಳಿತ ಮೊಕ್ತೇಸರ ಡಾ. ಸತೀಶ್ಚಂದ್ರ ಸುರ್ಯಗುತ್ತು ತಿಳಿಸಿದ್ದಾರೆ.

ಮಾ.18ರಂದು ಬೆಳಿಗ್ಗೆ ಗಣಪತಿ ಹೋಮ, ಕಲಶಪೂಜೆ, ಕಲಶಾಭೀಷೇಕ, ಸಂಜೆ ರಂಗಪೂಜೆ ಉತ್ಸವ, ಮಾ.19ರಂದು ಬೆಳಿಗ್ಗೆ ಗಣಹೋಮ, ನವಕಪ್ರಧಾನ ಕಲಶಾಭೀಷೇಕ, ಧ್ವಜಾರೋಹಣ, ಮಹಾಪೂಜೆ, ಮಾ.20ರಂದು ಸಂಜೆ ಸುರ್ಯಗುತ್ತು ಮನೆಯಿಂದ ಧರ್ಮದೈವಗಳ ಭಂಡಾರದ ಆಗಮನ, ಉತ್ಸವ, ವಸಂತ ಕಟ್ಟೆ ಪೂಜೆ, ಮಾ.21ರಂದು ಸೊಡರಬಲಿ ಉತ್ಸವ, ರಾತ್ರಿ ಕೆರೆಕಟ್ಟೆ ಪೂಜೆ, ಉತ್ಸವ, ಮಾ.22ರಂದು ದರ್ಶನಬಲಿ ಉತ್ಸವ, ಮಹಾಪೂಜೆ, ರಾತ್ರಿ ಉತ್ಸವ, ಪುಷ್ಪ ರಥೋತ್ಸವ, ನೃತ್ಯಬಲಿ ಉತ್ಸವ, ರಥಕಟ್ಟೆ ಪೂಜೆ, ಮಹಾಪೂಜೆ ಶಯನೋತ್ಸವ, ಮಾ.23ರಂದು ಕವಾಟೋದ್ಘಾಟನೆ, ಕಲಶಾಭೀಷೇಕ, ಮಹಾಪೂಜೆ, ಸಂಜೆ ಯಾತ್ರಾಹೋಮ, ಅವಭೃತ ಸ್ನಾನ ಕಾರ್ಯಕ್ರಮ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾ.20 ರಂದು ರಾತ್ರಿ ರಾಜ್ಯಪ್ರಶಸ್ತಿ ಪುರಸ್ಕೃತ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ರಚಿಸಿ ನಿರ್ದೇಶಿಸಿದ ಪುದರ್ ದೀದಾಂಡ್' ತುಳು ಹಾಸ್ಯಮಯ ನಾಟಕ, ಮಾ.21ರಂದು ದುರ್ಗಾ ಸ್ವಾತಿ ನೃತ್ಯಾಲಯ ಅಸೈಗೋಳಿ ಇದರ ನೃತ್ಯಗುರು ಕರ್ನಾಟಕ ಕಲಾಶ್ರೀ ವಿದುಷಿ ಸ್ವಾತಿ ಭಟ್ ಪಿ. ಇವರ ಶಿಷ್ಯರಿಂದನೃತ್ಯಾರಾಧನ’ ಕಾರ್ಯಕ್ರಮ ಮತ್ತು ಚಾಚಕೆರೆ ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮಂಡಳಿ ಸರಪಾಡಿ ಇವರಿಂದ ಯಕ್ಷಗಾನ ಬಯಲಾಟ ನಾಗರ ಪಂಚಮಿ, ಮಾ.22ರಂದು ರಾತ್ರಿ ಅಂಗನವಾಡಿ ಕೇಂದ್ರ ಸುರ್ಯ ಮತ್ತು ಕಿ.ಪ್ರಾ ಶಾಲೆ ಸುರ್ಯ ಇಲ್ಲಿಯ ಮಕ್ಕಳಿಂದಸಾಂಸ್ಕೃತಿಕ ಕಾರ್ಯಕ್ರಮ’ ರಾತ್ರಿ ಸಂಗಮ ಕಲಾವಿದರು ಉಜಿರೆ ಇವರಿಂದ ಸುಬ್ಬು ಸಂಟ್ಯಾರು ರಚಿಸಿ, ಗಿರೀಶ್ ಹೊಳ್ಳ ನಿರ್ದೇಶಿಸಿರುವ ತುಳು ಸಾಂಸಾರಿಕ ಹಾಸ್ಯಮಯ ನಾಟ `ಪಚ್ಚು ಪಾತೆರೊಡು’ ಪ್ರದರ್ಶನಗೊಳ್ಳಲಿದೆ.

Related posts

ಪೆರಿಂಜೆ : ಪಡ್ಡಾಯಿಬೆಟ್ಟು ನಿವಾಸಿ ಕೃಷಿಕ ವಿಠಲ ಹೆಗ್ಡೆ ನಿಧನ

Suddi Udaya

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

Suddi Udaya

ಉಜಿರೆ ಪ್ರಮೋದ್ ಗೌಡ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಸೆ.8: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

Suddi Udaya

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya
error: Content is protected !!