March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

ಬೆಳ್ತಂಗಡಿ: ಎಟಿಎಂನಿಂದ ಹಣ ಪಡೆಯುವ ಬಗ್ಗೆ ಗೊತ್ತಿಲ್ಲದ ವ್ಯಕ್ತಿ, ಅಪರಿಚಿತನಲ್ಲಿ ಹಣ ತೆಗೆದುಕೊಡುವಂತೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ್ದು, ಎಟಿಎಂ ಕಾರ್ಡ್ ಬದಲಾಯಿಸಿ ವಾಪಾಸು ನೀಡಿದ ವ್ಯಕ್ತಿಬಳಿಕ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ.ಲಪಟಾಯಿಸಿದ ಘಟನೆ ನಡೆದಿದೆ.

ಮೆಲಂತಬೆಟ್ಟು ಗ್ರಾಮದ ಶರೀಫ್‌ (53) ಎಂಬವರ ದೂರಿನಂತೆ, ಬೆಳ್ತಂಗಡಿ ಕಸಬಾ ಗ್ರಾಮದ ರಾಷ್ಟ್ರೀಕೃತ ಬ್ಯಾಂಕು ಒಂದರ ಎಟಿಎಂ ನಿಂದ ಹಣ ತೆಗೆಯಲು ಜ.11ರಂದು ತೆರಳಿದ್ದು, ಎಟಿಎಂ ಕಾರ್ಡ್ ಬಳಕೆಯ ಬಗ್ಗೆ ತಿಳಿಯದೇ ಇದ್ದುದರಿಂದ,ಅಲ್ಲೇ ಪಕ್ಕದಲ್ಲಿರುವ ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್‌ ನೀಡಿ,ಎ.ಟಿ.ಎಂ.ಪಿನ್‌ ನಂಬರ್‌ ತಿಳಿಸಿ ಹಣ ತೆಗೆದುಕೊಡುವಂತೆ ವಿನಂತಿಸಿಕೊಂಡಿದ್ದು, ಅಪರಿಚಿತ ವ್ಯಕ್ತಿಯು 3,000ರೂ.ಗಳನ್ನು ಎ.ಟಿ.ಎಂ.ಮಿಷನ್‌ ನಿಂದ ತೆಗೆದು ನೀಡಿರುತ್ತಾನೆ. ಮೂರು ದಿನಗಳ ನಂತರ ಇವರ ಖಾತೆಯಿಂದ ರೂ 1,05,300 ರೂ. ಕಡಿತವಾಗಿರುವ ವಿಚಾರ ತಿಳಿದುಬಂದಿದೆ.

ಈ ಬಗ್ಗೆ ಬ್ಯಾಂಕಿನಲ್ಲಿ ವಿಚಾರಿಸಿದಾಗ, ಅಪರಿಚಿತ ವ್ಯಕ್ತಿ ಎಟಿಎಂ ಕಾರ್ಡ್‌ ಬದಲಾಯಿಸಿ ನೀಡಿರುವುದು ತಿಳಿದುಬಂದಿರುತ್ತದೆ.ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನ ಹರಿದ್ವಾರ ಶಾಖಾ ಮಠಕ್ಕೆ ಮಾಜಿ ಸಂಸದ ನಳಿನ್ ಕುಮಾರ್ ಭೇಟಿ

Suddi Udaya

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ತಿನ ಸದಸ್ಯರು ಶ್ರೀಮತಿ ಮಲ್ಲಿಕಾ ಪಕ್ಕಳ ಬೇಟಿ

Suddi Udaya

ಬೆಳಾಲು: ಕೊಲ್ಪಾಡಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ನಿಧನ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya

ಅಲಂಕೃತಗೊಂಡ ನಾರಾವಿ ಸಖಿ ಮತದಾನ ಕೇಂದ್ರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ಭಜನಾ ತಂಡದ ಸದಸ್ಯರಿಗೆ ಸಮವ‌ಸ್ತ್ರ ವಿತರಣೆ

Suddi Udaya
error: Content is protected !!