September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

ಬೆಳ್ತಂಗಡಿ: ಎಟಿಎಂನಿಂದ ಹಣ ಪಡೆಯುವ ಬಗ್ಗೆ ಗೊತ್ತಿಲ್ಲದ ವ್ಯಕ್ತಿ, ಅಪರಿಚಿತನಲ್ಲಿ ಹಣ ತೆಗೆದುಕೊಡುವಂತೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ್ದು, ಎಟಿಎಂ ಕಾರ್ಡ್ ಬದಲಾಯಿಸಿ ವಾಪಾಸು ನೀಡಿದ ವ್ಯಕ್ತಿಬಳಿಕ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ.ಲಪಟಾಯಿಸಿದ ಘಟನೆ ನಡೆದಿದೆ.

ಮೆಲಂತಬೆಟ್ಟು ಗ್ರಾಮದ ಶರೀಫ್‌ (53) ಎಂಬವರ ದೂರಿನಂತೆ, ಬೆಳ್ತಂಗಡಿ ಕಸಬಾ ಗ್ರಾಮದ ರಾಷ್ಟ್ರೀಕೃತ ಬ್ಯಾಂಕು ಒಂದರ ಎಟಿಎಂ ನಿಂದ ಹಣ ತೆಗೆಯಲು ಜ.11ರಂದು ತೆರಳಿದ್ದು, ಎಟಿಎಂ ಕಾರ್ಡ್ ಬಳಕೆಯ ಬಗ್ಗೆ ತಿಳಿಯದೇ ಇದ್ದುದರಿಂದ,ಅಲ್ಲೇ ಪಕ್ಕದಲ್ಲಿರುವ ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್‌ ನೀಡಿ,ಎ.ಟಿ.ಎಂ.ಪಿನ್‌ ನಂಬರ್‌ ತಿಳಿಸಿ ಹಣ ತೆಗೆದುಕೊಡುವಂತೆ ವಿನಂತಿಸಿಕೊಂಡಿದ್ದು, ಅಪರಿಚಿತ ವ್ಯಕ್ತಿಯು 3,000ರೂ.ಗಳನ್ನು ಎ.ಟಿ.ಎಂ.ಮಿಷನ್‌ ನಿಂದ ತೆಗೆದು ನೀಡಿರುತ್ತಾನೆ. ಮೂರು ದಿನಗಳ ನಂತರ ಇವರ ಖಾತೆಯಿಂದ ರೂ 1,05,300 ರೂ. ಕಡಿತವಾಗಿರುವ ವಿಚಾರ ತಿಳಿದುಬಂದಿದೆ.

ಈ ಬಗ್ಗೆ ಬ್ಯಾಂಕಿನಲ್ಲಿ ವಿಚಾರಿಸಿದಾಗ, ಅಪರಿಚಿತ ವ್ಯಕ್ತಿ ಎಟಿಎಂ ಕಾರ್ಡ್‌ ಬದಲಾಯಿಸಿ ನೀಡಿರುವುದು ತಿಳಿದುಬಂದಿರುತ್ತದೆ.ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಡಾ.ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

Suddi Udaya

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

Suddi Udaya

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಎಕ್ಸೆಲ್ ಟೆಕ್ನೊ ಸ್ಕೂಲ್ ವೇಣೂರಿಗೆ ಶೇ.100 ಫಲಿತಾಂಶ:ತೇರ್ಗಡೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ ಬೃಹತ್ ಹಿಂದೂ ಸಂಗಮ ಆಯೋಜನಾ ಸಮಿತಿ ರಚನೆ

Suddi Udaya
error: Content is protected !!