26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಿನ್ನಾಭರಣ ಪರೀಕ್ಷಕನ ವಜಾ ಪ್ರಕರಣ; ಪ್ರಕರಣದ ನಿಗೂಢತೆಯ ಬಯಲಿಗೆ ಆಗ್ರಹ; ಮಾ.18ರಂದು ಕೊಕ್ಕಡದಲ್ಲಿ ಪ್ರತಿಭಟನೆ

ಕೊಕ್ಕಡದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಕೃತ ಬ್ಯಾಂಕೊಂದರ ಶಾಖೆಯಲ್ಲಿ ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಮಾ.18ರಂದು ಬೃಹತ್ ಪ್ರತಿಭಟನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕೊಕ್ಕಡದ ವೈದ್ಯ ಡಾ.ಗಣೇಶ್ ಪ್ರಸಾದ್ ತಿಳಿಸಿದ್ದಾರೆ.


ಮಾ.12ರಂದು ಕೊಕ್ಕಡದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಊರಿನಲ್ಲಿ ಪ್ರಾಮಾಣಿಕರಾಗಿ ಜನಮೆಚ್ಚುಗೆ ಪಡೆದಿದ್ದ ಚಿನ್ನಾಭರಣ ಪರೀಕ್ಷಕ (ಸರಾಫ) ರೊಬ್ಬರನ್ನು ಬ್ಯಾಂಕೊಂದರಿಂದ ವಜಾ ಮಾಡಲಾಗಿದೆ. ಕಾರಣ ಕೇಳಿದರೆ ನಕಲಿ ಚಿನ್ನಾಭರಣ ಪ್ರಕರಣದಲ್ಲಿ ಅವರು ತಪ್ಪೆಸಗಿದ್ದಾರೆ ಎಂಬ ಉತ್ತರ ಲಭಿಸುತ್ತಿದೆ. ಆದರೆ ನಕಲಿ ಚಿನ್ನಾಭರಣ ತಂದವರು ಯಾರು?, ಅವರು ಎಲ್ಲಿಯವರು? ಯಾವ ಆಧಾರದಲ್ಲಿ ಅವರಿಗೆ ಸಾಲ ನೀಡಲಾಯಿತು? ನಕಲಿ ಚಿನ್ನಾಭರಣವನ್ನು ತಂದು ವಂಚನೆ ಎಸಗಿದವರ ವಿರುದ್ದ ಪೊಲೀಸರಿಗೆ ದೂರು ಸಲ್ಲಿಸಲಾಗಿದೆಯಾ? ಸಲ್ಲಿಸಲಾಗಿದ್ದರೆ ನಕಲಿ ಚಿನ್ನಾಭರಣವನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆಯಾ? ನಕಲಿ ಚಿನ್ನಾಭರಣವನ್ನು ತಂದಿರಿಸಿದವನ ಬಂಧನವಾಗಿದೆಯಾ? ಎಂಬಿತ್ಯಾದಿ ಪ್ರಶ್ನೆಗಳಿಗೆ ಬ್ಯಾಂಕ್ ಅಧಿಕಾರಿಗಳು ಯಾವುದೇ ಸಮರ್ಪಕ ಉತ್ತರ ನೀಡದೆ ಇರುವುದರಿಂದ ಪ್ರಕರಣದಲ್ಲಿ ಬಡಪಾಯಿ ಸರಫಾರನ್ನು ಬಲಿಪಶು ಮಾಡಲಾಗಿರುವ ಶಂಕೆ ಮೂಡಿದೆ ಎಂದು ಅವರು ಆರೋಪಿಸಿದರು.


ಇಲ್ಲಿ ನಡೆದಿದೆ ಎನ್ನಲಾದ ವಂಚನೆ ಪ್ರಕರಣದ ದಾಖಲೀಕರಣವಿಲ್ಲ, ವಂಚಕನ ವಿರುದ್ಧ ಕಾನೂನು ಕ್ರಮವಿಲ್ಲ. ವಂಚನೆಗೆ ಕುಮ್ಮಕ್ಕು ನೀಡಿದವರ ಮೇಲೆ ಶಿಸ್ತು ಕ್ರಮವಿಲ್ಲ. ಆದಾಗ್ಯೂ ಸರಾಫರೊಬ್ಬರೇ ಅಪರಾಧಿ ಎಂದೆಣಿಸಿ ಕರ್ತವ್ಯದಿಂದ ವಜಾಗೊಳ್ಳುವ ನಿಗೂಢ ಪ್ರಕರಣದ ಸತ್ಯಾಸತ್ಯತೆ ಬಯಲುಗೊಳ್ಳಬೇಕೆಂದು ಅಗ್ರಹಿಸಿ ಎಂಟು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಮಾ.18ರಂದು ಕೊಕ್ಕಡದ ಕೆನರಾ ಬ್ಯಾಂಕ್ ಎದುರುಗಡೆ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಸಮಾಜ ಸೇವಕ ತುಕ್ರಪ್ಪ ಶೆಟ್ಟಿ ನೂಜೆ, ಉದ್ಯಮಿ ಇಸ್ಮಾಯಿಲ್, ಪ್ರಗತಿಪರ ಕೃಷಿಕ ಈಶ್ವರ ಭಟ್ ಹಿತ್ತಿಲು, ಗ್ರಾ.ಪಂ. ಮಾಜಿ ಸದಸ್ಯ ಶೀನಪ್ಪ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

Related posts

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಸಮಸ್ಯೆ

Suddi Udaya

ಅಳದಂಗಡಿ: ಆರ್ವಮ್ ಡ್ರೆಸ್ ಹೌಸ್ ನಲ್ಲಿ ದೀಪಾವಳಿ ಧಮಾಕ

Suddi Udaya

ಉಜಿರೆ : ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, – ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಕುಂಟಿನಿ ಮದ್ರಸದಲ್ಲಿ 79 ನೇ ಸ್ವಾತಂತ್ರ್ಯ ಸಂಭ್ರಮ ಆಚರಣೆ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya

ಕೆಂಪು ಕಲ್ಲು ಮತ್ತು ಮರಳು ಸಾಗಾಟಕ್ಕೆ ಕಠಿಣ ಕಾನೂನು : ಜನ ಪ್ರತಿನಿಧಿಗಳ ಮೌನವೇಕೆ ? : ಸಮಾಜ ಸೇವಕ ಡಾ. ರವಿ ಕಕ್ಕೆ ಪದವು

Suddi Udaya
error: Content is protected !!