38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

ಬೆಳ್ತಂಗಡಿ: ಅಂಬ್ಯೂಲೆನ್ಸ್‌ ವಾಹನವು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಚಲಾಯಿಸಿಕೊಂಡು ಹೋಗುವಾಗ ವಿರುದ್ದ ದಿಕ್ಕಿನಿಂದ ಬಂದ ಕಾರನ್ನು ಆದರ ಚಾಲಕನು ಅಂಬ್ಯೂಲೆನ್ಸ್‌ ವಾಹನಕ್ಕೆ ಅಡ್ಡ ನಿಲ್ಲಿಸಿ, ಕಾರಿನ ಚಾಲಕ ಮತ್ತು ಓರ್ವ ಮಹಿಳೆ ಕಾರಿನಿಂದ ಇಳಿದು ಅಂಬ್ಯೂಲೆನ್ಸ್ ಚಾಲಕನಿಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು, ವಾಹನಕ್ಕೆ ಹಾನಿ ಮಾಡಿದ ಘಟನೆ ಮಾ.12ರಂದು ನಡೆದಿದೆ.

ಕಡಬ ವಿದ್ಯಾ ನಗರ ಸುಬ್ರಮಣ್ಯ ಗ್ರಾಮದ ನಿವಾಸಿ ರಕ್ಷಿತ್‌ ಕುಮಾರ್‌, (27) ಎಂಬವರ ದೂರಿನಂತೆ, ಮಾ.12 ರಂದು ಮಧ್ಯಾಹ್ನ ಸಮಯ, ಬೆಳ್ತಂಗಡಿ ತಾಲೂಕು ಲಾಯಿಲಾ ಗ್ರಾಮದ ಲಾಯಿಲಾ ಜಂಕ್ಷನ್‌ ಎಂಬಲ್ಲಿ, ಅಂಬ್ಯುಲೆನ್ಸ್ ಚಾಲಕ ರಕ್ಷಿತ್ ರವರು ತಮ್ಮ ಬಾಬ್ತು ಕೆಎ-06-ಜಿ-1259 ನೇ ನಂಬ್ರದ ಅಂಬ್ಯೂಲೆನ್ಸ್‌ ವಾಹನವನ್ನು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಚಲಾಯಿಸಿಕೊಂಡು ಹೋಗುವಾಗ ವಿರುದ್ದ ದಿಕ್ಕಿನಿಂದ ಬಂದ ಕೆಎ-51- ಎಂಡಿ -4631 ನೇ ಕಾರನ್ನು ಆದರ ಚಾಲಕನು ರಕ್ಷಿತ್ ಚಲಾಯಿಸುತ್ತಿದ್ದ ಅಂಬ್ಯೂಲೆನ್ಸ್‌ ವಾಹನಕ್ಕೆ ಅಡ್ಡ ನಿಲ್ಲಿಸಿ, ಕಾರಿನ ಚಾಲಕ ಮತ್ತು ಓರ್ವ ಮಹಿಳೆ ಕಾರಿನಿಂದ ಇಳಿದು ಬಂದು ರಕ್ಷಿತ್ಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು, ವಾಹನಕ್ಕೆ ಹಾನಿ ಮಾಡಿ ಸುಮಾರು 3000/-ರೂ ಗಳಷ್ಟು ನಷ್ಟ ಉಂಟಾಗಿದೆ ಎಂದು ಆರೋಪಿಸಿದ್ದಾರೆ.

ಹಲ್ಲೆಯಿಂದ ಗಾಯಗೊಂಡ ರಕ್ಷಿತ್ ರವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ 33/2024 ಕಲಂ:504,341,323, 427, ಜೊತೆಗೆ 34 ಭಾ ದಂ ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದಲ್ಲಿಶ್ರವಣಬೆಳಗೊಳದ ಪೂಜ್ಯ ಚಾರುಕೀರ್ತಿ ಭಟ್ಟಾರಕರ ದಿವ್ಯ ಉಪಸ್ಥಿತಿಯಲ್ಲಿ ಚಂದನ ಷಷ್ಠಿ ನೋಂಪಿ ಉದ್ಯಾಪನೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಕಳಿಯ ‘ಬಿ’ ಕಾರ್ಯಕ್ಷೇತ್ರದಿಂದ ಸುರಕ್ಷ ಯೋಜನೆ ಅಡಿಯಲ್ಲಿ ಗೀತಾ ರವರಿಗೆ ಚೆಕ್ ಹಸ್ತಾಂತರ

Suddi Udaya

ಬಂಗಾಡಿ-ಕೊಲ್ಲಿ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಕೃಷಿಕರಿಗೆ ಸಂಕಷ್ಟ: ಕೂಡಲೇ ಕ್ರಮ ಕೈಗೊಳ್ಳುವಂತೆ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಆಗ್ರಹ

Suddi Udaya

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

Suddi Udaya

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

Suddi Udaya
error: Content is protected !!