25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

ಬೆಳ್ತಂಗಡಿ: ಅಂಬ್ಯೂಲೆನ್ಸ್‌ ವಾಹನವು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಚಲಾಯಿಸಿಕೊಂಡು ಹೋಗುವಾಗ ವಿರುದ್ದ ದಿಕ್ಕಿನಿಂದ ಬಂದ ಕಾರನ್ನು ಆದರ ಚಾಲಕನು ಅಂಬ್ಯೂಲೆನ್ಸ್‌ ವಾಹನಕ್ಕೆ ಅಡ್ಡ ನಿಲ್ಲಿಸಿ, ಕಾರಿನ ಚಾಲಕ ಮತ್ತು ಓರ್ವ ಮಹಿಳೆ ಕಾರಿನಿಂದ ಇಳಿದು ಅಂಬ್ಯೂಲೆನ್ಸ್ ಚಾಲಕನಿಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು, ವಾಹನಕ್ಕೆ ಹಾನಿ ಮಾಡಿದ ಘಟನೆ ಮಾ.12ರಂದು ನಡೆದಿದೆ.

ಕಡಬ ವಿದ್ಯಾ ನಗರ ಸುಬ್ರಮಣ್ಯ ಗ್ರಾಮದ ನಿವಾಸಿ ರಕ್ಷಿತ್‌ ಕುಮಾರ್‌, (27) ಎಂಬವರ ದೂರಿನಂತೆ, ಮಾ.12 ರಂದು ಮಧ್ಯಾಹ್ನ ಸಮಯ, ಬೆಳ್ತಂಗಡಿ ತಾಲೂಕು ಲಾಯಿಲಾ ಗ್ರಾಮದ ಲಾಯಿಲಾ ಜಂಕ್ಷನ್‌ ಎಂಬಲ್ಲಿ, ಅಂಬ್ಯುಲೆನ್ಸ್ ಚಾಲಕ ರಕ್ಷಿತ್ ರವರು ತಮ್ಮ ಬಾಬ್ತು ಕೆಎ-06-ಜಿ-1259 ನೇ ನಂಬ್ರದ ಅಂಬ್ಯೂಲೆನ್ಸ್‌ ವಾಹನವನ್ನು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಚಲಾಯಿಸಿಕೊಂಡು ಹೋಗುವಾಗ ವಿರುದ್ದ ದಿಕ್ಕಿನಿಂದ ಬಂದ ಕೆಎ-51- ಎಂಡಿ -4631 ನೇ ಕಾರನ್ನು ಆದರ ಚಾಲಕನು ರಕ್ಷಿತ್ ಚಲಾಯಿಸುತ್ತಿದ್ದ ಅಂಬ್ಯೂಲೆನ್ಸ್‌ ವಾಹನಕ್ಕೆ ಅಡ್ಡ ನಿಲ್ಲಿಸಿ, ಕಾರಿನ ಚಾಲಕ ಮತ್ತು ಓರ್ವ ಮಹಿಳೆ ಕಾರಿನಿಂದ ಇಳಿದು ಬಂದು ರಕ್ಷಿತ್ಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು, ವಾಹನಕ್ಕೆ ಹಾನಿ ಮಾಡಿ ಸುಮಾರು 3000/-ರೂ ಗಳಷ್ಟು ನಷ್ಟ ಉಂಟಾಗಿದೆ ಎಂದು ಆರೋಪಿಸಿದ್ದಾರೆ.

ಹಲ್ಲೆಯಿಂದ ಗಾಯಗೊಂಡ ರಕ್ಷಿತ್ ರವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ 33/2024 ಕಲಂ:504,341,323, 427, ಜೊತೆಗೆ 34 ಭಾ ದಂ ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಆತ್ಮಹತ್ಯೆಗೆ ಯತ್ನಿಸಿದ್ದ ಕೊಕ್ಕಡದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದ “ಸುಪ್ರಸಾದ” ಭೋಜನ ಶಾಲೆಯಲ್ಲಿ” “ಮುಷ್ಠಿ ಅಕ್ಕಿ” ವಿಶೇಷ ಸೇವೆ

Suddi Udaya

ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ ಒಕ್ಕೂಟದ ವತಿಯಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ಉಡುಪಿ ವಿಭಾಗದಿಂದ ಬ್ಯಾರಿಕೇಡ್ ಹಾಗೂ ಗಡಿಯಾರ ಕೊಡುಗೆ

Suddi Udaya
error: Content is protected !!