22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

ಬೆಳ್ತಂಗಡಿ: ಅಂಬ್ಯೂಲೆನ್ಸ್‌ ವಾಹನವು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಚಲಾಯಿಸಿಕೊಂಡು ಹೋಗುವಾಗ ವಿರುದ್ದ ದಿಕ್ಕಿನಿಂದ ಬಂದ ಕಾರನ್ನು ಆದರ ಚಾಲಕನು ಅಂಬ್ಯೂಲೆನ್ಸ್‌ ವಾಹನಕ್ಕೆ ಅಡ್ಡ ನಿಲ್ಲಿಸಿ, ಕಾರಿನ ಚಾಲಕ ಮತ್ತು ಓರ್ವ ಮಹಿಳೆ ಕಾರಿನಿಂದ ಇಳಿದು ಅಂಬ್ಯೂಲೆನ್ಸ್ ಚಾಲಕನಿಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು, ವಾಹನಕ್ಕೆ ಹಾನಿ ಮಾಡಿದ ಘಟನೆ ಮಾ.12ರಂದು ನಡೆದಿದೆ.

ಕಡಬ ವಿದ್ಯಾ ನಗರ ಸುಬ್ರಮಣ್ಯ ಗ್ರಾಮದ ನಿವಾಸಿ ರಕ್ಷಿತ್‌ ಕುಮಾರ್‌, (27) ಎಂಬವರ ದೂರಿನಂತೆ, ಮಾ.12 ರಂದು ಮಧ್ಯಾಹ್ನ ಸಮಯ, ಬೆಳ್ತಂಗಡಿ ತಾಲೂಕು ಲಾಯಿಲಾ ಗ್ರಾಮದ ಲಾಯಿಲಾ ಜಂಕ್ಷನ್‌ ಎಂಬಲ್ಲಿ, ಅಂಬ್ಯುಲೆನ್ಸ್ ಚಾಲಕ ರಕ್ಷಿತ್ ರವರು ತಮ್ಮ ಬಾಬ್ತು ಕೆಎ-06-ಜಿ-1259 ನೇ ನಂಬ್ರದ ಅಂಬ್ಯೂಲೆನ್ಸ್‌ ವಾಹನವನ್ನು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಚಲಾಯಿಸಿಕೊಂಡು ಹೋಗುವಾಗ ವಿರುದ್ದ ದಿಕ್ಕಿನಿಂದ ಬಂದ ಕೆಎ-51- ಎಂಡಿ -4631 ನೇ ಕಾರನ್ನು ಆದರ ಚಾಲಕನು ರಕ್ಷಿತ್ ಚಲಾಯಿಸುತ್ತಿದ್ದ ಅಂಬ್ಯೂಲೆನ್ಸ್‌ ವಾಹನಕ್ಕೆ ಅಡ್ಡ ನಿಲ್ಲಿಸಿ, ಕಾರಿನ ಚಾಲಕ ಮತ್ತು ಓರ್ವ ಮಹಿಳೆ ಕಾರಿನಿಂದ ಇಳಿದು ಬಂದು ರಕ್ಷಿತ್ಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು, ವಾಹನಕ್ಕೆ ಹಾನಿ ಮಾಡಿ ಸುಮಾರು 3000/-ರೂ ಗಳಷ್ಟು ನಷ್ಟ ಉಂಟಾಗಿದೆ ಎಂದು ಆರೋಪಿಸಿದ್ದಾರೆ.

ಹಲ್ಲೆಯಿಂದ ಗಾಯಗೊಂಡ ರಕ್ಷಿತ್ ರವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ 33/2024 ಕಲಂ:504,341,323, 427, ಜೊತೆಗೆ 34 ಭಾ ದಂ ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮಾ.20-27: ಶ್ರೀ ರಾಮಕ್ಷೇತ್ರದಲ್ಲಿ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹ- ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಯೋಧ ಎ.ಸಿ.ಪಿ. ನಾಯಕ್ ಸುಬೇದಾರ್ ಮೋಹನ ಗೌಡರಿಗೆ ಉಜಿರೆ ವರ್ತಕರ ಸಂಘದಿಂದ ಗೌರವಾರ್ಪಣೆ

Suddi Udaya

ಸುಲ್ಕೇರಿಮೊಗ್ರು ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ವಾರ್ಷಿಕ ಜಾತ್ರೋತ್ಸವ

Suddi Udaya

ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ

Suddi Udaya

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya
error: Content is protected !!