September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

ಬೆಳ್ತಂಗಡಿ: ಅಂಬ್ಯೂಲೆನ್ಸ್‌ ವಾಹನವು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಚಲಾಯಿಸಿಕೊಂಡು ಹೋಗುವಾಗ ವಿರುದ್ದ ದಿಕ್ಕಿನಿಂದ ಬಂದ ಕಾರನ್ನು ಆದರ ಚಾಲಕನು ಅಂಬ್ಯೂಲೆನ್ಸ್‌ ವಾಹನಕ್ಕೆ ಅಡ್ಡ ನಿಲ್ಲಿಸಿ, ಕಾರಿನ ಚಾಲಕ ಮತ್ತು ಓರ್ವ ಮಹಿಳೆ ಕಾರಿನಿಂದ ಇಳಿದು ಅಂಬ್ಯೂಲೆನ್ಸ್ ಚಾಲಕನಿಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು, ವಾಹನಕ್ಕೆ ಹಾನಿ ಮಾಡಿದ ಘಟನೆ ಮಾ.12ರಂದು ನಡೆದಿದೆ.

ಕಡಬ ವಿದ್ಯಾ ನಗರ ಸುಬ್ರಮಣ್ಯ ಗ್ರಾಮದ ನಿವಾಸಿ ರಕ್ಷಿತ್‌ ಕುಮಾರ್‌, (27) ಎಂಬವರ ದೂರಿನಂತೆ, ಮಾ.12 ರಂದು ಮಧ್ಯಾಹ್ನ ಸಮಯ, ಬೆಳ್ತಂಗಡಿ ತಾಲೂಕು ಲಾಯಿಲಾ ಗ್ರಾಮದ ಲಾಯಿಲಾ ಜಂಕ್ಷನ್‌ ಎಂಬಲ್ಲಿ, ಅಂಬ್ಯುಲೆನ್ಸ್ ಚಾಲಕ ರಕ್ಷಿತ್ ರವರು ತಮ್ಮ ಬಾಬ್ತು ಕೆಎ-06-ಜಿ-1259 ನೇ ನಂಬ್ರದ ಅಂಬ್ಯೂಲೆನ್ಸ್‌ ವಾಹನವನ್ನು ಬೆಳ್ತಂಗಡಿಯಿಂದ ಉಜಿರೆ ಕಡೆಗೆ ಚಲಾಯಿಸಿಕೊಂಡು ಹೋಗುವಾಗ ವಿರುದ್ದ ದಿಕ್ಕಿನಿಂದ ಬಂದ ಕೆಎ-51- ಎಂಡಿ -4631 ನೇ ಕಾರನ್ನು ಆದರ ಚಾಲಕನು ರಕ್ಷಿತ್ ಚಲಾಯಿಸುತ್ತಿದ್ದ ಅಂಬ್ಯೂಲೆನ್ಸ್‌ ವಾಹನಕ್ಕೆ ಅಡ್ಡ ನಿಲ್ಲಿಸಿ, ಕಾರಿನ ಚಾಲಕ ಮತ್ತು ಓರ್ವ ಮಹಿಳೆ ಕಾರಿನಿಂದ ಇಳಿದು ಬಂದು ರಕ್ಷಿತ್ಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು, ವಾಹನಕ್ಕೆ ಹಾನಿ ಮಾಡಿ ಸುಮಾರು 3000/-ರೂ ಗಳಷ್ಟು ನಷ್ಟ ಉಂಟಾಗಿದೆ ಎಂದು ಆರೋಪಿಸಿದ್ದಾರೆ.

ಹಲ್ಲೆಯಿಂದ ಗಾಯಗೊಂಡ ರಕ್ಷಿತ್ ರವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ 33/2024 ಕಲಂ:504,341,323, 427, ಜೊತೆಗೆ 34 ಭಾ ದಂ ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ ಎಸ್‌.ಐ.ಟಿ ಕಚೇರಿಗೆ ಹಾಜರಾದ ಜಯಂತ್.ಟಿ

Suddi Udaya

ಕೊಯ್ಯೂರು: ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ : 5 ನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ಸನ ಮಡಂತ್ಯಾರು ರಿಗೆ 600 ರಲ್ಲಿ 600 ಅಂಕ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್, ಸೀರೆಗಳಿಗೆ ಕೇವಲ ರೂ 99

Suddi Udaya

ತಣ್ಣೀರುಪಂಥ ವಲಯದ ಕರಾಯ ಕಲ್ಲೇರಿ, ಕುಪ್ಪೆಟ್ಟಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಭಾರೀ ಗಾಳಿ ಮಳೆ: ಮಿತ್ತಬಾಗಿಲು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
error: Content is protected !!