24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

ಬೆಳ್ತಂಗಡಿ: ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ ಕಾರ್ಯಕ್ರಮವನ್ನು ಮಾ.12 ರಂದು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೋ ಪದ್ಮನಾಭ ಕೆ, ಮುಖ್ಯಸ್ಥರು ವಾಣಿಜ್ಯ ವಿಭಾಗ ವಹಿಸಿದ್ದರು. ಇವರು ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳು ವೃತ್ತಿ ಕೌಶಲ್ಯ ತರಬೇತಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ದಿವ್ಯ. ಎ ಆಗಮಿಸಿದ್ದರು. ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆ ನಡೆಸಿದರು.

ಈ ಕಾರ್ಯಕ್ರಮದಲ್ಲಿ ಪ್ರೊ ಸುರೇಶ್ ವಿ, ಸಂಚಾಲಕರು ವಿದ್ಯಾರ್ಥಿ ಪ್ರತಿಭಾ ವೇದಿಕೆ, ಡಾ.ರವಿ ಎಂ. ಎನ್. ಸಂಚಾಲಕರು ಸ್ನಾತಕೋತ್ತರ ವಿಭಾಗ, ಪ್ರೊ ನವೀನ್ ಹಾಗೂ ಪ್ರೊ ರಾಜೇಶ್ವರಿ ವಾಣಿಜ್ಯ ಶಾಸ್ತ್ರ ವಿಭಾಗ, ಪ್ರೊ ರಶ್ಮಿ, ನಿರ್ವಹಣಾ ವಿಭಾಗ ಹಾಗೂ ಪ್ರೊ ಕವಿತಾ, ಇತಿಹಾಸ ವಿಭಾಗ ಹಾಗೂ ಇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ತೃತೀಯ ಬಿಕಾಂನ ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು. ವಿನುತ ಹಾಗೂ ತಂಡದವರು ಪ್ರಾರ್ಥಿಸಿ, ಅಂಕಿತ ಸ್ವಾಗತಿಸಿ, ವನಿತಾ ಧನ್ಯವಾದವಿತ್ತರು.

Related posts

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಕ್ಷೇತ್ರಗಳಲ್ಲೂ ಬಿಜೆಪಿ ಬೆಂಬಲಿತರ ಜಯಭೇರಿ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಮಹಿಳಾ ವೇದಿಕೆ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!