24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಸಿಎಎ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

ಬೆಳ್ತಂಗಡಿ : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್‌ಡಿಪಿಐ ಪಕ್ಷ ಮಾ.12ರಂದು ರಾತ್ರಿ ಪ್ರತಿಭಟನೆ ನಡೆಸಿದೆ.


ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ನವಾಝ್ ಕಟ್ಟೆ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆ (2019) ಜಾರಿಗೆ ಬರಲಿದೆ ಎಂದು ಕೇಂದ್ರ ಬಿಜೆಪಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಕ್ರಮವನ್ನು ಎಸ್ ಡಿಪಿಐ ತೀವ್ರವಾಗಿ ಖಂಡಿಸುತ್ತದೆ. ಜನರು ಈ ಕಾನೂನನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದರು.
ಚುನಾವಣಾ ಸೋಲಿನ ಭಯ ಮತ್ತು ಸುಪ್ರೀಂ ಕೋರ್ಟ್ ಬಹಿರಂಗಪಡಿಸಿದ ಚುನಾವಣಾ ಬಾಂಡ್ ಗಳಲ್ಲಿನ ಅಕ್ರಮಗಳಿಂದಾಗಿ ಜನರನ್ನು ವಿಭಜಿಸಲು ಮತ್ತು ದೇಶದಲ್ಲಿ ಅಶಾಂತಿಯ ವಾತಾವರಣವನ್ನು ಸೃಷ್ಟಿಸಲು ಚುನಾವಣಾ ಘೋಷಣೆ ಮಾಡುತ್ತಿರುವ ಸಮಯದಲ್ಲಿ ಬಿಜೆಪಿ ಸರ್ಕಾರ ಈ ಘೋಷಣೆ ಮಾಡಿದೆ ಎಂದು ಆರೋಪಿಸಿದರು.


ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುಂಜಾಲಕಟ್ಟೆ, ಬಂಗೇರಕಟ್ಟೆ, ಪಣಕಜೆ, ಕಡವಿನ ಬಾಗಿಲು, ಕುದ್ರಡ್ಕ, ಅಂಡೆತಡ್ಕ, ಬಾಜಾರು, ಪೆರಲ್ದರ ಕಟ್ಟೆ, ಲಾಯಿಲ, ಬೆಳ್ತಂಗಡಿ ನಗರ ವ್ಯಾಪ್ತಿಯ ಸಂಜಯನಗರ ಕಡೆಗಳಲ್ಲಿ ಮಂಗಳವಾರ ರಾತ್ರಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಬಿತ್ತಿಪತ್ರ ಪ್ರದರ್ಶನ ಹಾಗೂ CAA ವಿರುದ್ಧ ಘೋಷಣೆ ಕೂಗುವ ಮೂಲಕ ಎಸ್‌ಡಿಪಿಐ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ನಾಗರೀಕರು ಬೀದಿಗೆ ಬಂದು ಪ್ರತಿಭಟನೆ ನಡೆಸಿದರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಮ್ಮೇಳನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶೇ.95.25

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ

Suddi Udaya

ನಾಲ್ಕೂರು: ಜಯಂತಿ ಮಜ್ಜೇನಿಗುರಿ ಅಸೌಖ್ಯದಿಂದ ನಿಧನ

Suddi Udaya

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

Suddi Udaya

ಕೊಲ್ಪಾಡಿ ಕಾರ್ಯಕ್ಷೇತ್ರದ ಓಂ ಶ್ರೀ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
error: Content is protected !!