22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಸಿಎಎ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

ಬೆಳ್ತಂಗಡಿ : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್‌ಡಿಪಿಐ ಪಕ್ಷ ಮಾ.12ರಂದು ರಾತ್ರಿ ಪ್ರತಿಭಟನೆ ನಡೆಸಿದೆ.


ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ನವಾಝ್ ಕಟ್ಟೆ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆ (2019) ಜಾರಿಗೆ ಬರಲಿದೆ ಎಂದು ಕೇಂದ್ರ ಬಿಜೆಪಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಕ್ರಮವನ್ನು ಎಸ್ ಡಿಪಿಐ ತೀವ್ರವಾಗಿ ಖಂಡಿಸುತ್ತದೆ. ಜನರು ಈ ಕಾನೂನನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದರು.
ಚುನಾವಣಾ ಸೋಲಿನ ಭಯ ಮತ್ತು ಸುಪ್ರೀಂ ಕೋರ್ಟ್ ಬಹಿರಂಗಪಡಿಸಿದ ಚುನಾವಣಾ ಬಾಂಡ್ ಗಳಲ್ಲಿನ ಅಕ್ರಮಗಳಿಂದಾಗಿ ಜನರನ್ನು ವಿಭಜಿಸಲು ಮತ್ತು ದೇಶದಲ್ಲಿ ಅಶಾಂತಿಯ ವಾತಾವರಣವನ್ನು ಸೃಷ್ಟಿಸಲು ಚುನಾವಣಾ ಘೋಷಣೆ ಮಾಡುತ್ತಿರುವ ಸಮಯದಲ್ಲಿ ಬಿಜೆಪಿ ಸರ್ಕಾರ ಈ ಘೋಷಣೆ ಮಾಡಿದೆ ಎಂದು ಆರೋಪಿಸಿದರು.


ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುಂಜಾಲಕಟ್ಟೆ, ಬಂಗೇರಕಟ್ಟೆ, ಪಣಕಜೆ, ಕಡವಿನ ಬಾಗಿಲು, ಕುದ್ರಡ್ಕ, ಅಂಡೆತಡ್ಕ, ಬಾಜಾರು, ಪೆರಲ್ದರ ಕಟ್ಟೆ, ಲಾಯಿಲ, ಬೆಳ್ತಂಗಡಿ ನಗರ ವ್ಯಾಪ್ತಿಯ ಸಂಜಯನಗರ ಕಡೆಗಳಲ್ಲಿ ಮಂಗಳವಾರ ರಾತ್ರಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಬಿತ್ತಿಪತ್ರ ಪ್ರದರ್ಶನ ಹಾಗೂ CAA ವಿರುದ್ಧ ಘೋಷಣೆ ಕೂಗುವ ಮೂಲಕ ಎಸ್‌ಡಿಪಿಐ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ನಾಗರೀಕರು ಬೀದಿಗೆ ಬಂದು ಪ್ರತಿಭಟನೆ ನಡೆಸಿದರು.

Related posts

ಮಡಂತ್ಯಾರು ಸುವೇಗ ಮೋಟಾರ್ಸ್ ನಲ್ಲಿ ಹೀರೊ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಬಿಡುಗಡೆ

Suddi Udaya

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆ ಪಡೆದ ಮರೋಡಿಯ ಸ್ವಸ್ತಿಕ್ ಪೂಜಾರಿ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾಷಣ ಸ್ಪರ್ಧೆ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ

Suddi Udaya
error: Content is protected !!