April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.14-19 ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

ಕೊಯ್ಯೂರು : ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೆಯು ಶ್ರೀ ವೇದಮೂರ್ತಿ ನಂದಕುಮಾರ ತಂತ್ರಿ ಇವರ ನೇತೃತ್ವದಲ್ಲಿ ಮಾ.14ರಿಂದ 19ರ ತನಕ ನಡೆಯಲಿದೆ ಎಂದು ಕೊಯ್ಯರುಗುತ್ತು ಅನುವಂಶಿಕ ಆಡಳಿತ ಮೊಕ್ತೇಸರರರು ಕೆ.ಬಿ. ಹರಿಶ್ಚಂದ್ರ ಬಲ್ಲಾಳ್ ಹಾಗೂ ಪ್ರಧಾನ ಆರ್ಚಕ ಕೆ.ಅಶೋಕ್ ಕುಮಾರ್ ಬಾಂಗಿಣ್ಣಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಮಾ.14 ರಂದು ಬೆಳಿಗ್ಗೆ ಪ್ರಾರ್ಥನೆ, ಪ್ರಶ್ನಾಚಿಂತನೆ, ತೋರಣ ಮುಹೂರ್ತ, ಕಲಶಾಭಿಷೇಕ, ಧ್ವಜಾರೋಹಣ, ಮಹಾಪೂಜೆ ರಾತ್ರಿ ೮ರಿಂದ ಉತ್ಸವ, ಮಹಾಪೂಜೆ, ಬಲಿ ನಡೆಯಲಿದೆ. ಮಾ.15 ರಂದು ಬೆಳಗ್ಗೆ ಉತ್ಸವ, ಕಲಶಾಭಿಷೇಕ, ಮಹಾಪೂಜೆ, ರಾತ್ರಿ 8 ರಿಂದ ಉತ್ಸವ, ಪಡಿಯಕ್ಕಿ, ಮಹಾಪೂಜೆ, ಬಲಿ ನಡೆಯಲಿದೆ. ಮಾ.16ರಂದು ಬೆಳಗ್ಗೆ 9ರಿಂದ ದರ್ಶನ ಬಲಿ, ಕಲಶಾಭಿಷೇಕ, ಮಹಾಪೂಜೆ, ಮಧ್ಯಾಹ್ನ 1ರಿಂದ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ 8 ರಿಂದ ಕೊಟ್ಟಿಗೆ ಕೆಲಸ, ಮಹಾರಥೋತ್ಸವ, ಮಹಾಪೂಜೆ, ಭೂತಬಲಿ, ಕವಾಟ ಬಂಧನ, ಶ್ರೀ ಉಮನಾಥ ದೇವಾಡಿಗ, ಅಶ್ವಥಪುರ ಮತ್ತು ಬಳಗದಿಂದ ನಾಗಸ್ವರ ವಾದನ ನಡೆಯಲಿದೆ.


ಮಾ.17 ರಂದು ಬೆಳಿಗ್ಗೆ 7 ರಿಂದ ಕವಾಟ ಉದ್ಘಾಟನೆ, ಅಭಿಷೇಕ, ಪ್ರಸನ್ನಪೂಜೆ, ಮೂಲಸ್ಥಾನ ಗುಂಡದಿಂದ ಭಂಡಾರದ ಆಗಮನ, ಮಹಾಪೂಜೆ. 11ರಿಂದ ಶ್ರೀ ಚಂಡಿಕಾ ಯಾಗ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ,ಮಹಮ್ಮಾಯಿ ಗುಮ್ಮಟ ನೃತ್ಯ ನಡೆಯಲಿದೆ. ರಾತ್ರಿ 7ರಿಂದ ಬೆಳ್ತಂಗಡಿ ‘ಶೆಟ್ಟಿ ಆರ್ಟ್ಸ್’ ಗಿರಿಧರ ಶೆಟ್ಟಿ ಬಳಗದವರಿಂದ ವಿನೂತನ ಶೈಲಿಯ ನೃತ್ಯ ಶ್ರೀ ಪಂಚದುರ್ಗಾಪರಮೇಶ್ವರಿ ಗೆಳೆಯರ ಬಳಗ ಕೊಯ್ಯೂರು ಇವರಿಂದ ‘ಬರವುದ ಬೊಳ್ಳಿ’ ರಾಜೇಶ್ ಆಚಾರ್ಯ ಪರ್ಕಳ ವಿರಚಿತ ಏರ್ ತಾಂಕುವೆರ್” ತುಳು ಹಾಸ್ಯ ಸಾಂಸಾರಿಕ ನಾಟಕ, ರಾತ್ರಿ 9ರಿಂದ ಧರ್ಮದೈವಗಳ ನೇಮೋತ್ಸವ, ಶ್ರೀ ದೇವರ ಉತ್ಸವ, ಶ್ರೀ ಉಳ್ಳಾಲ್ತಿ ನೇಮೋತ್ಸವ, ಮಹಾಪೂಜೆ ನಡೆಯಲಿದೆ. ಮಾ.18ಬೆಳಿಗ್ಗೆ 9ರಿಂದ ಕಲಶಾಭಿಷೇಕ, ಮಹಾಪೂಜೆ, ರಾತ್ರಿ ೬ರಿಂದ ಅವಕೃತ ಸ್ನಾನ, ಧ್ವಜಾವರೋಹಣ, ಮಹಾಪೂಜೆ ನಡೆಯಲಿದೆ. ಮಾ.19 ರಂದು ಸಂಪ್ರೋಕ್ಷಣೆ, ಮಹಾಪೂಜೆ. ಹಾಗೂ ಮಾ. 22 ರಂದು ಜಾತ್ರಾ ಪ್ರಯುಕ್ತ ಬಪ್ಪನಾಡು ಮೇಳದವರಿಂದ ‘ನಾಡೂರ ನಾಗಬನ’ ಯಕ್ಷಗಾನ ಬಯಲಾಟ ನಡೆಯಲಿದೆ.

Related posts

ಎ.7-12: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಪ್ರಸಿದ್ದ ಉದ್ಯಮಿ ಶಶಿಧರ ಬಿ.ಶೆಟ್ಟಿ ನವಶಕ್ತಿಯವರಿಂದ ದೇವಸ್ಥಾನಗಳಿಗೆ ರೂ.30 ಲಕ್ಷ ದೇಣಿಗೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!