September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

ಪೆರಿಂಜೆ: ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.14 ರಿಂದ ಪ್ರಾರಂಭಗೊಂಡು ಮಾ.19ರವರೆಗೆ ನಡೆಯಲಿದೆ.

ಮಾ.14 ರಂದು ಮಧ್ಯಾಹ್ನ ಪೆರಿಂಜೆ ಶ್ರೀ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ದೇವರಿಗೆ ಪಂಚಾಮೃತಾಭಿಷೇಕ, ಶ್ರೀ ಅಮ್ಮನವರಿಗೆ ವರಹ ಪೂಜೆ, ರಾತ್ರಿ ಗಂಟೆ 9.30ಕ್ಕೆ ಪಡ್ಡ್ಯೋಡಿಗುತ್ತಿನಲ್ಲಿ ಉಪಹಾರ ರಾತ್ರಿ ಗಂಟೆ 10.00ಕ್ಕೆ ಪಡ್ಡ್ಯೋಡಿಗುತ್ತಿನಿಂದ ಶ್ರೀ ಕೊಡಮಣಿತ್ತಾಯ ದೈವದ ಭಂಡಾರ ಇಳಿಯುವುದು, ಪಡ್ಡ್ಯಾರಬೆಟ್ಟಕ್ಕೆ ಆಗಮನ, ಧ್ವಜಾರೋಹಣ, ಬಲಿ, ಚೆಂಡು ನಡೆಯಲಿದೆ.

ಮಾ.15 ರಂದು ಭೂತಬಲಿ ಉತ್ಸವ, ಮಾ.16 ರಂದು ಅಂಬೋಡಿ, ಬಲಿ ಉತ್ಸವ, ಹೂವಿನ ಪೂಜೆ, ರಥಾರೋಹಣ, ಮಾ.17 ರಂದು ವರ್ಷಾವಧಿ ಜಾತ್ರೋತ್ಸವ, ಮಧ್ಯಾಹ್ನ ಗಂಟೆ 12ಕ್ಕೆ ರಥದಲ್ಲಿ ಮಹಾಪೂಜೆ, ರಥೋತ್ಸವ, ಹೂವಿನ ಪೂಜೆ 1.30 ರಿಂದ 7.30ರ ತನಕ ಮಹಾ ಅನ್ನಸಂತರ್ಪಣೆ ರಾತ್ರಿ ಕೊಡಮಣಿತ್ತಾಯ ದೈವದ ನೇಮೋತ್ಸವ, ಮಾ.18 ರಂದು ಧ್ವಜ ಅವರೋಹಣ, ಸಂಪ್ರೋಕ್ಷಣೆ ಪಡ್ಡ್ಯೋಡಿ ಗುತ್ತಿಗೆ ಭಂಡಾರ ಹಿಂದಿರುಗುವುದು., ಮಾ.19 ರಂದು ರಾತ್ರಿ ಗಂಟೆ 7.30 ರಿಂದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಲಾಪಗಳು, ಹೂವಿನ ಪೂಜೆ, ಕೊಡಮಣಿತ್ತಾಯ ದೈವದ ಕುರುಸಂಬಿಲ ನೇಮ, ತುಲಾಭಾರ ಸೇವೆ ನಡೆಯಲಿದೆ ಎಂದು ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಅನುವಂಶೀಯ ಆಡಳಿತದಾರರು ಎ. ಜೀವಂಧರ ಕುಮಾರ್ ಯಾನೆ ಕಂಚಿ ಪೂವಣಿಯವರು ಪಡ್ಡ್ಯೋಡಿಗುತ್ತು ತಿಳಿಸಿದ್ದಾರೆ.

ಪ್ರತಿ ಸಂಕ್ರಮಣ ಮತ್ತು ಜಾತ್ರಾ ಸಮಯದ 5ದಿನಗಳು ಅನ್ನಸಂತರ್ಪಣೆ ಸೇವೆ ನಡೆಯಲಿರುವುದು.

Related posts

ಎಕ್ಸೆಲ್ ಶೈಕ್ಷಣಿಕ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭೆಗಳಿಗೆ ಬೆಳಕು ನೀಡುವ ವಿದ್ಯಾರ್ಥಿವೇತನ ವಿತರಣೆ

Suddi Udaya

ಮೇ 17: ಬೆಳ್ತಂಗಡಿ ರೋಟರಿ ಸಂಸ್ಥೆಯಿಂದ “ಕನ್ನಡ ಸಾಹಿತ್ಯ ಸಂಭ್ರಮ ಮತ್ತು ಬಹುಭಾಷಾ ಕವಿ ಗೋಷ್ಠಿ” ಸಮ್ಮೇಳನ

Suddi Udaya

ಪಡ್ಡಂದಡ್ಕ ಚೀಂಕ್ರ ಪೂಜಾರಿ ನಿಧನ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಎಂ.ಡಿ.ಎಸ್ ಪರೀಕ್ಷೆ: ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್‌ ಕುಲಾಲ್ ರವರಿಗೆ 5ನೇ ರ್‍ಯಾಂಕ್

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ರೆಡ್ ಕ್ರಾಸ್ ಘಟಕ ಹಾಗೂ ಅತ್ಯುತ್ತಮ ರೆಡ್ ಕ್ರಾಸ್ ಜೂನಿಯರ್ ಕೌನ್ಸಿಲರ್ ಪ್ರಶಸ್ತಿ

Suddi Udaya
error: Content is protected !!