25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

ಬೆಳ್ತಂಗಡಿ: ಎಟಿಎಂನಿಂದ ಹಣ ಪಡೆಯುವ ಬಗ್ಗೆ ಗೊತ್ತಿಲ್ಲದ ವ್ಯಕ್ತಿ, ಅಪರಿಚಿತನಲ್ಲಿ ಹಣ ತೆಗೆದುಕೊಡುವಂತೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ್ದು, ಎಟಿಎಂ ಕಾರ್ಡ್ ಬದಲಾಯಿಸಿ ವಾಪಾಸು ನೀಡಿದ ವ್ಯಕ್ತಿಬಳಿಕ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ.ಲಪಟಾಯಿಸಿದ ಘಟನೆ ನಡೆದಿದೆ.

ಮೆಲಂತಬೆಟ್ಟು ಗ್ರಾಮದ ಶರೀಫ್‌ (53) ಎಂಬವರ ದೂರಿನಂತೆ, ಬೆಳ್ತಂಗಡಿ ಕಸಬಾ ಗ್ರಾಮದ ರಾಷ್ಟ್ರೀಕೃತ ಬ್ಯಾಂಕು ಒಂದರ ಎಟಿಎಂ ನಿಂದ ಹಣ ತೆಗೆಯಲು ಜ.11ರಂದು ತೆರಳಿದ್ದು, ಎಟಿಎಂ ಕಾರ್ಡ್ ಬಳಕೆಯ ಬಗ್ಗೆ ತಿಳಿಯದೇ ಇದ್ದುದರಿಂದ,ಅಲ್ಲೇ ಪಕ್ಕದಲ್ಲಿರುವ ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್‌ ನೀಡಿ,ಎ.ಟಿ.ಎಂ.ಪಿನ್‌ ನಂಬರ್‌ ತಿಳಿಸಿ ಹಣ ತೆಗೆದುಕೊಡುವಂತೆ ವಿನಂತಿಸಿಕೊಂಡಿದ್ದು, ಅಪರಿಚಿತ ವ್ಯಕ್ತಿಯು 3,000ರೂ.ಗಳನ್ನು ಎ.ಟಿ.ಎಂ.ಮಿಷನ್‌ ನಿಂದ ತೆಗೆದು ನೀಡಿರುತ್ತಾನೆ. ಮೂರು ದಿನಗಳ ನಂತರ ಇವರ ಖಾತೆಯಿಂದ ರೂ 1,05,300 ರೂ. ಕಡಿತವಾಗಿರುವ ವಿಚಾರ ತಿಳಿದುಬಂದಿದೆ.

ಈ ಬಗ್ಗೆ ಬ್ಯಾಂಕಿನಲ್ಲಿ ವಿಚಾರಿಸಿದಾಗ, ಅಪರಿಚಿತ ವ್ಯಕ್ತಿ ಎಟಿಎಂ ಕಾರ್ಡ್‌ ಬದಲಾಯಿಸಿ ನೀಡಿರುವುದು ತಿಳಿದುಬಂದಿರುತ್ತದೆ.ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಹೊಕ್ಕಾಡಿಗೋಳಿ ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಬಡ ಕುಟುಂಬದ ಮನೆಯ ಮೇಲ್ಚಾವಣಿ ದುರಸ್ತಿ

Suddi Udaya

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯ ಮಹಿಳಾ ಆಯೋಗದಿಂದ ಪತ್ರ

Suddi Udaya

ಉಜಿರೆ : ಶ್ರೀ ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ಕಾರ್ಯಕ್ರಮ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಲಾಯಿಲ ಹಾಗೂ ನಗರ ಮಹಾಶಕ್ತಿಕೇಂದ್ರದ ಸಭೆ

Suddi Udaya

ಬಂದಾರು : ಶಾಸಕ ಹರೀಶ್ ಪೂಂಜರಿಂದ ಬೈಪಾಡಿ ಸರ್ಕಲ್ ಬಳಿ ರಿಕ್ಷಾ ತಂಗುದಾಣ ಲೋಕಾರ್ಪಣೆ

Suddi Udaya
error: Content is protected !!